25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ “ಕುಂದು ಕೊರತೆಗಳ ಅಹವಾಲು ಸ್ವೀಕಾರ” ಕಾರ್ಯಕ್ರಮದಲ್ಲಿ ಈ ಮನವಿಯನ್ನು ನೀಡಿದಾಗ ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.


ಸಾರ್ವಜನಿಕ ವಿಚಾರದ ಫ್ಲಾಟಿಂಗ್ ಸಮಸ್ಯೆ, ರಸ್ತೆ ಸಮಸ್ಯೆ, ಇನ್ನಿತರ ಮೂಲಭೂತ ಸೌಕರ್ಯಗಳ ರಚನಾತ್ಮಕ ಅರ್ಜಿ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಸಂವಾದ ನಡೆಸಿ, ಸೂಕ್ತ ಪರಿಹಾರಕ್ಕೆ ಸಲಹೆ ನೀಡಿದ್ದಾರೆ.


ಕೆಲವರು ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರ ಬಳಿಯಲ್ಲಿ ತಮ್ಮ ಅಳಳು ಹೇಳಿದಾಗ ಈ ವಿಚಾರ ಕಾನೂನು ವ್ಯಾಪ್ತಿಯಲ್ಲಿ ಜರುಗಬೇಕಾಗುವುದರಿಂದ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾವಧಾನವಾಗಿ ಜನರಿಗೆ ಸಲಹೆ ಸೂಚನೆ ನೀಡುತ್ತಿದ್ದ ವಿಚಾರ ಪ್ರಶಂಸರ್ಹವಾಗಿತ್ತು.
ಅಲ್ಲದೆ ಜಿಲ್ಲಾಧಿಕಾರಿಯವರ ಈ ಭೇಟಿಯಿಂದ ಕಡತ ವಿಲೇವಾರಿ ಕಾರ್ಯಕ್ರಮಕ್ಕೆ ವೇಗ ಬರಲು ಸಹಾಯವಾಗಿದ್ದು, ತಾಲೂಕು ಆಡಳಿತದಲ್ಲಿ ಹೊಸ ಹುರುಪಿಗೆ ಕಾರಣವಾಗಿ, ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮ ಅನುಕೂಲವಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರ ವೃಷಭ ಆರಿಗಾ, ತಾಲೂಕು ಕಾರ್ಯದರ್ಶಿ ಕೃಷ್ಣ ಉಪಸ್ಥಿತರಿದ್ದರು.

Related posts

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!