September 6, 2026
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ “ಕುಂದು ಕೊರತೆಗಳ ಅಹವಾಲು ಸ್ವೀಕಾರ” ಕಾರ್ಯಕ್ರಮದಲ್ಲಿ ಈ ಮನವಿಯನ್ನು ನೀಡಿದಾಗ ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.


ಸಾರ್ವಜನಿಕ ವಿಚಾರದ ಫ್ಲಾಟಿಂಗ್ ಸಮಸ್ಯೆ, ರಸ್ತೆ ಸಮಸ್ಯೆ, ಇನ್ನಿತರ ಮೂಲಭೂತ ಸೌಕರ್ಯಗಳ ರಚನಾತ್ಮಕ ಅರ್ಜಿ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಸಂವಾದ ನಡೆಸಿ, ಸೂಕ್ತ ಪರಿಹಾರಕ್ಕೆ ಸಲಹೆ ನೀಡಿದ್ದಾರೆ.


ಕೆಲವರು ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರ ಬಳಿಯಲ್ಲಿ ತಮ್ಮ ಅಳಳು ಹೇಳಿದಾಗ ಈ ವಿಚಾರ ಕಾನೂನು ವ್ಯಾಪ್ತಿಯಲ್ಲಿ ಜರುಗಬೇಕಾಗುವುದರಿಂದ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾವಧಾನವಾಗಿ ಜನರಿಗೆ ಸಲಹೆ ಸೂಚನೆ ನೀಡುತ್ತಿದ್ದ ವಿಚಾರ ಪ್ರಶಂಸರ್ಹವಾಗಿತ್ತು.
ಅಲ್ಲದೆ ಜಿಲ್ಲಾಧಿಕಾರಿಯವರ ಈ ಭೇಟಿಯಿಂದ ಕಡತ ವಿಲೇವಾರಿ ಕಾರ್ಯಕ್ರಮಕ್ಕೆ ವೇಗ ಬರಲು ಸಹಾಯವಾಗಿದ್ದು, ತಾಲೂಕು ಆಡಳಿತದಲ್ಲಿ ಹೊಸ ಹುರುಪಿಗೆ ಕಾರಣವಾಗಿ, ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮ ಅನುಕೂಲವಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರ ವೃಷಭ ಆರಿಗಾ, ತಾಲೂಕು ಕಾರ್ಯದರ್ಶಿ ಕೃಷ್ಣ ಉಪಸ್ಥಿತರಿದ್ದರು.

Related posts

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya
error: Content is protected !!