September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಅರಸಿನಮಕ್ಕಿ: ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಶಶಿಧರ್ ಜೆ ಎಸ್ (ಗಣಿತ ಶಿಕ್ಷಕರು) ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ ಹಾಗೆಯೇ ಇನ್ನೋರ್ವ ಶಿಕ್ಷಕರಾದ ಶಶಿಕಾಂತ್ (ವಿಜ್ಞಾನ ಶಿಕ್ಷಕರು) ರವರು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಶಾಲೆಗೆ ವರ್ಗಾವಣೆಗೊಂಡಿರುತ್ತಾರೆ.

ವರ್ಗಾವಣೆಗೊಂಡಿರುವ ಶಿಕ್ಷಕರಿಗೆ ಎಸ್ ಡಿ ಎಂ ಸಿ, ಪೋಷಕ ವೃಂದ ಮತ್ತು ಶಾಲಾ ವತಿಯಿಂದ ಬೀಳ್ಕೊಡುಗೆ ಸಮಾರಂಭ ಅರಸಿನಮಕ್ಕಿ ಪ್ರೌಢಶಾಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ತನಿಯಪ್ಪ ಗೌಡರು ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರ ಹಾಗೂ ಎಸ್ ಡಿ ಎಂ ಸಿ ಸದಸ್ಯರು ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಟ್ಟರು.


ಕಾರ್ಯಕ್ರಮವನ್ನು ಶ್ರೀಮತಿ ಸೇವ್ರಿನ್ ಮಾರ್ಟಿಸ್ ನಿರೂಪಿಸಿ, ಶ್ರೀಮತಿ ಮೀನಾಕ್ಷಿ ಸ್ವಾಗತಿಸಿದರು. ಶ್ರೀಮತಿ ಮಂಜುಳಾ ವಂದಿಸಿದರು.

Related posts

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!