25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ “ಕುಂದು ಕೊರತೆಗಳ ಅಹವಾಲು ಸ್ವೀಕಾರ” ಕಾರ್ಯಕ್ರಮದಲ್ಲಿ ಈ ಮನವಿಯನ್ನು ನೀಡಿದಾಗ ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.


ಸಾರ್ವಜನಿಕ ವಿಚಾರದ ಫ್ಲಾಟಿಂಗ್ ಸಮಸ್ಯೆ, ರಸ್ತೆ ಸಮಸ್ಯೆ, ಇನ್ನಿತರ ಮೂಲಭೂತ ಸೌಕರ್ಯಗಳ ರಚನಾತ್ಮಕ ಅರ್ಜಿ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಸಂವಾದ ನಡೆಸಿ, ಸೂಕ್ತ ಪರಿಹಾರಕ್ಕೆ ಸಲಹೆ ನೀಡಿದ್ದಾರೆ.


ಕೆಲವರು ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರ ಬಳಿಯಲ್ಲಿ ತಮ್ಮ ಅಳಳು ಹೇಳಿದಾಗ ಈ ವಿಚಾರ ಕಾನೂನು ವ್ಯಾಪ್ತಿಯಲ್ಲಿ ಜರುಗಬೇಕಾಗುವುದರಿಂದ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾವಧಾನವಾಗಿ ಜನರಿಗೆ ಸಲಹೆ ಸೂಚನೆ ನೀಡುತ್ತಿದ್ದ ವಿಚಾರ ಪ್ರಶಂಸರ್ಹವಾಗಿತ್ತು.
ಅಲ್ಲದೆ ಜಿಲ್ಲಾಧಿಕಾರಿಯವರ ಈ ಭೇಟಿಯಿಂದ ಕಡತ ವಿಲೇವಾರಿ ಕಾರ್ಯಕ್ರಮಕ್ಕೆ ವೇಗ ಬರಲು ಸಹಾಯವಾಗಿದ್ದು, ತಾಲೂಕು ಆಡಳಿತದಲ್ಲಿ ಹೊಸ ಹುರುಪಿಗೆ ಕಾರಣವಾಗಿ, ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮ ಅನುಕೂಲವಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರ ವೃಷಭ ಆರಿಗಾ, ತಾಲೂಕು ಕಾರ್ಯದರ್ಶಿ ಕೃಷ್ಣ ಉಪಸ್ಥಿತರಿದ್ದರು.

Related posts

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!