September 6, 2026
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ “ಕುಂದು ಕೊರತೆಗಳ ಅಹವಾಲು ಸ್ವೀಕಾರ” ಕಾರ್ಯಕ್ರಮದಲ್ಲಿ ಈ ಮನವಿಯನ್ನು ನೀಡಿದಾಗ ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.


ಸಾರ್ವಜನಿಕ ವಿಚಾರದ ಫ್ಲಾಟಿಂಗ್ ಸಮಸ್ಯೆ, ರಸ್ತೆ ಸಮಸ್ಯೆ, ಇನ್ನಿತರ ಮೂಲಭೂತ ಸೌಕರ್ಯಗಳ ರಚನಾತ್ಮಕ ಅರ್ಜಿ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಸಂವಾದ ನಡೆಸಿ, ಸೂಕ್ತ ಪರಿಹಾರಕ್ಕೆ ಸಲಹೆ ನೀಡಿದ್ದಾರೆ.


ಕೆಲವರು ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರ ಬಳಿಯಲ್ಲಿ ತಮ್ಮ ಅಳಳು ಹೇಳಿದಾಗ ಈ ವಿಚಾರ ಕಾನೂನು ವ್ಯಾಪ್ತಿಯಲ್ಲಿ ಜರುಗಬೇಕಾಗುವುದರಿಂದ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾವಧಾನವಾಗಿ ಜನರಿಗೆ ಸಲಹೆ ಸೂಚನೆ ನೀಡುತ್ತಿದ್ದ ವಿಚಾರ ಪ್ರಶಂಸರ್ಹವಾಗಿತ್ತು.
ಅಲ್ಲದೆ ಜಿಲ್ಲಾಧಿಕಾರಿಯವರ ಈ ಭೇಟಿಯಿಂದ ಕಡತ ವಿಲೇವಾರಿ ಕಾರ್ಯಕ್ರಮಕ್ಕೆ ವೇಗ ಬರಲು ಸಹಾಯವಾಗಿದ್ದು, ತಾಲೂಕು ಆಡಳಿತದಲ್ಲಿ ಹೊಸ ಹುರುಪಿಗೆ ಕಾರಣವಾಗಿ, ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮ ಅನುಕೂಲವಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರ ವೃಷಭ ಆರಿಗಾ, ತಾಲೂಕು ಕಾರ್ಯದರ್ಶಿ ಕೃಷ್ಣ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!