22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ “ಕುಂದು ಕೊರತೆಗಳ ಅಹವಾಲು ಸ್ವೀಕಾರ” ಕಾರ್ಯಕ್ರಮದಲ್ಲಿ ಈ ಮನವಿಯನ್ನು ನೀಡಿದಾಗ ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.


ಸಾರ್ವಜನಿಕ ವಿಚಾರದ ಫ್ಲಾಟಿಂಗ್ ಸಮಸ್ಯೆ, ರಸ್ತೆ ಸಮಸ್ಯೆ, ಇನ್ನಿತರ ಮೂಲಭೂತ ಸೌಕರ್ಯಗಳ ರಚನಾತ್ಮಕ ಅರ್ಜಿ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಸಂವಾದ ನಡೆಸಿ, ಸೂಕ್ತ ಪರಿಹಾರಕ್ಕೆ ಸಲಹೆ ನೀಡಿದ್ದಾರೆ.


ಕೆಲವರು ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರ ಬಳಿಯಲ್ಲಿ ತಮ್ಮ ಅಳಳು ಹೇಳಿದಾಗ ಈ ವಿಚಾರ ಕಾನೂನು ವ್ಯಾಪ್ತಿಯಲ್ಲಿ ಜರುಗಬೇಕಾಗುವುದರಿಂದ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾವಧಾನವಾಗಿ ಜನರಿಗೆ ಸಲಹೆ ಸೂಚನೆ ನೀಡುತ್ತಿದ್ದ ವಿಚಾರ ಪ್ರಶಂಸರ್ಹವಾಗಿತ್ತು.
ಅಲ್ಲದೆ ಜಿಲ್ಲಾಧಿಕಾರಿಯವರ ಈ ಭೇಟಿಯಿಂದ ಕಡತ ವಿಲೇವಾರಿ ಕಾರ್ಯಕ್ರಮಕ್ಕೆ ವೇಗ ಬರಲು ಸಹಾಯವಾಗಿದ್ದು, ತಾಲೂಕು ಆಡಳಿತದಲ್ಲಿ ಹೊಸ ಹುರುಪಿಗೆ ಕಾರಣವಾಗಿ, ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮ ಅನುಕೂಲವಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರ ವೃಷಭ ಆರಿಗಾ, ತಾಲೂಕು ಕಾರ್ಯದರ್ಶಿ ಕೃಷ್ಣ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya
error: Content is protected !!