25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

ಬೆಳ್ತಂಗಡಿ: ದೇಶದಲ್ಲಿ ಸಂಸ್ಕೃತಿ, ಜನಾಂಗ, ಭಾಷೆ ಮತ್ತು ಕಾನೂನಿನಲ್ಲಿ ಕಂಡುಬರುವ ಗೊಂದಲ ನಿವಾರಣೆಯಾಗಬೇಕಾದರೆ ಸಮಾನ ನಾಗರಿಕ ಸಂಹಿತೆ ಜಾರಿಯಾಗಲೇಬೇಕು ಎಂದು ಬೆಳ್ತಂಗಡಿಯ ನ್ಯಾಯವಾದಿಗಳಾದ ಧನಂಜಯ ರಾವ್ ಬಿ.ಕೆ. ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಸಾಕ್ಷರತಾ ಸಂಘ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜರುಗಿದ ಸಮಾನ ನಾಗರಿಕ ಸಂಹಿತೆ ವಿಷಯದ ಕುರಿತು ಮಾತನಾಡುತ್ತಾ, ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಹಕ್ಕುಗಳನ್ನು ತಿಳಿದುಕೊಂಡಂತೆ ಕರ್ತವ್ಯವನ್ನು ಕೂಡ ಪಾಲಿಸಬೇಕು. ರಾಷ್ಟ್ರ, ರಾಷ್ಟ್ರಗೀತೆ, ಸಂವಿಧಾನ, ರಾಷ್ಟ್ರನಾಯಕರು, ಭಾಷೆ, ಸಂಸ್ಕೃತಿ ಇದೆಲ್ಲವನ್ನು ಗೌರವಿಸಿ ನಡೆಯುವುದು ನಮ್ಮ ಕರ್ತವ್ಯವಾಗಿದೆ. ದೇಶದ ಏಕರೂಪವಾಗಿ ಸಹಬಾಳ್ವೆಯಿಂದ ಬದುಕುವ ಅವಕಾಶ ಇರಬೇಕು. ಇದರಿಂದ ದೇಶದಲ್ಲಿ ಸುಭದ್ರತೆ ನೆಲೆಗೊಳ್ಳಲು ಸಾಧ್ಯವಿದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ಕಾನೂನು ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ವಂದಿಸಿದರು. ಕು|ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!