September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸೆ.3ರಂದು ಬೆಳ್ತಂಡಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಈಗಾಗಲೇ ನ್ಯಾಯಾಲಯಗಳು ಮಾಡಿರುವ ಆದೇಶವನ್ನು ಉಲ್ಲಂಘಿಸದಂತೆ ಹಾಗೂ ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕಿನ ಸಮಾನ ಮನಸ್ಕ ಶಾಂತಿಪ್ರಿಯ ನಾಗರಿಕರು ಸೆ.1ರಂದು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಜೊತೆಗೆ ಕು| ಸೌಜನ್ಯಾಳ ಅಸಹಜ ಸಾವಿನ ಬಗ್ಗೆ ಅವರ ಕುಟುಂಬದ ಬೇಡಿಕೆಯಂತೆ ಹೆಚ್ಚುವರಿ ತನಿಖೆಯನ್ನು ನಡೆಸುವಂತೆ ಸಮಾಜ ಮನಸ್ಕರು ಮನವಿಯಲ್ಲಿ ಸರಕಾರವನ್ನು ಒತ್ತಾಯಿಸಿದ್ದಾರೆ. ಮನವಿಯನ್ನು ಉಜಿರೆ ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ತಹಸೀಲ್ದಾರರಿಗೆ ನೀಡಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಧನಂಜಯ ರಾವ್, ಉಜಿರೆ ಅಶೋಕ್ ಭಟ್, ಶಶಿಕಿರಣ್ ಜೈನ್, ಡಾ.ಎಮ್.ಎಮ್.ದಯಾಕರ್, ಇಚ್ಚಿಲ ಸುಂದರ ಗೌಡ, ಯೋಗೀಶ್ ಕುಮಾರ್ ನಡಕರ, ಅನಂತಕೃಷ್ಣ ಮಚ್ಚಿಮಲೆ, ಜಯಂತ ಶೆಟ್ಟಿ ಮಡಂತ್ಯಾರ್, ರಾಘವೇಂದ್ರ ಬೈಪಡಿತ್ತಾಯ ಹಾಗೂ ಬೆಳ್ತಂಗಡಿ, ಉಜಿರೆ ಪರಿಸರದ ಗಣ್ಯರು ಉಪಸ್ಥಿತರಿದ್ದರು.

Related posts

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಅಳದಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ& ರಕ್ತದಾನ ಶಿಬಿರ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!