22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ 2023-24ನೇ ಸಾಲಿನಲ್ಲಿ ರಾಜ್ಯದ 15,000 ಹೆಕ್ಟೇರ್ ಪ್ರದೇಶದಲ್ಲಿ ಅನುಷ್ಠಾನಿಸಲಿರುವ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮವು ಸೆ.1 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಯಕ್ರಮವನ್ನು ನಬಾರ್ಡ್ ಮುಖ್ಯ ಮಹಾಪ್ರಬಂಧಕ ಟಿ ರಮೇಶ್ ಉದ್ಘಾಟಿಸಿ, ರೈತರಿಗೆ ಸಂದೇಶವನ್ನು ನೀಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಹೆಚ್ ಮಂಜುನಾಥ್ ಆಶಯ ಭಾಷಣವನ್ನು ಮಾಡಿದರು.

ಕಾರ್ಯಕ್ರಮದಲ್ಲಿ ಯಂತ್ರ ಶ್ರೀ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.ರೈತರಿಗೆ ನರ್ಸರಿ ಟ್ರೇ ಯನ್ನು ವಿತರಿಸಲಾಯಿತು.

ಕೇಂದ್ರೀಕೃತ ಭತ್ತದ ನರ್ಸರಿ ಮಾಡಿದ ರೈತರಿಗೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ಹೆಚ್ ಕೆಂಪೇಗೌಡ ರವರು ಸನ್ಮಾನಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ ಇವರು ಯಾಂತ್ರೀಕೃತ ಭತ್ತ ಬೇಸಾಯದ ಮಾಹಿತಿ ಪತ್ರ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ , ನಬಾರ್ಡ್ ನ ಜಿಲ್ಲಾ ಅಭಿವೃದ್ಧಿ ಪ್ರಬಂಧಕಿ ಶ್ರೀಮತಿ ಸಂಗೀತಾ ಎಸ್, ಬಂದಾರು ಕಡಮಾಜೆ ಫಾರ್ಮ್ ಪ್ರಗತಿಪರ ಕೃಷಿಕ ಜಯಪ್ರಕಾಶ್, ಪ್ರಗತಿ ಬಂಧು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಸಿರಿ ಸಂಸ್ಥೆ ನಿರ್ದೇಶಕ ಜನಾರ್ದನ್ , ಅಶೋಕ್ ಮಿನೇಜಸ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಿಹೆಚ್ಎಸ್ ಸಿ ಪ್ರಾದೇಶಿಕ ನಿರ್ದೇಶಕ ಅಬ್ರಹಾಂ ಎಂ.ಕೆ, ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಉಪಸ್ಥಿತರಿದ್ದರು.

Related posts

ಜ.10: ವಿದ್ಯುತ್ ನಿಲುಗಡೆ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!