23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸರಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ವಿಚಾರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾ| ಕೃಷ್ಣ ಎಸ್. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಎಸ್‌. ರಾಜಶೇಖರ್ ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ಆಯುಕ್ತರು, ದಕ್ಷಿಣ ಕನ್ನಡ ಎಸ್ಪಿ, ಬಂಟ್ವಾಳ ಡಿವೈಎಸ್ಪಿ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು, ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೆ, ಅಧೀನ ನ್ಯಾಯಾಲಯದ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ನಿರ್ದೇಶನ ನೀಡಿತು. ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಈ ಹೇಳಿಕೆ ನೀಡಬಾರದು ಎಂದು ಮಹೇಶ್ ಶೆಟ್ಟಿ ಅವರಿಗೆ ಮೌಖಿಕ ಎಚ್ಚರಿಕೆಯನ್ನೂ ನೀಡಿದೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ತನಿಖೆಯನ್ನಾದರೂ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ನ್ಯಾಯಾಂಗ ಮತ್ತು ಧರ್ಮಸ್ಥಳದ ಮಂಜುನಾಥ ದೇವಾಲಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಮತ್ತು ಅದಕ್ಕೆ ಸೇರಿದ ಸಂಸ್ಥೆಗಳು, ಟ್ರಸ್ಟ್ ವಿರುದ್ಧ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪೊಲೀಸ್ ಇಲಾಖೆಯ ಬಗ್ಗೆಯೂ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಜತೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!