23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ 2023-24 ನೇ ಸಾಲಿನ ಕ್ರೀಡಾವಾಣಿ ಉದ್ಘಾಟನೆ ನಡೆಯಿತು.


ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಡಾಜೆ ಫ್ರೌಡ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ರಾಷ್ಟ್ರೀಯ ಕ್ರೀಡಾಪಟು ಗುಣಪಾಲ್ ಎಂ.ಎಸ್ ಉದ್ಘಾಟಿಸಿ, ಕಾರ್ಯಕ್ರಮದ ಕುರಿತು ಮಾತನಾಡಿ ಕ್ರೀಡಾ ಸಾಧನೆಯನ್ನು ಕೊಂಡಾಡಿದರು. ಹಾಗೂ ಇನ್ನೋರ್ವ ಅತಿಥಿಯಾಗಿ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯನ್ನು ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷರಾಗಿ ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್ ಹೆಗ್ಡೆ ಉಪಸ್ಥಿತರಿದ್ದು, ಕ್ರೀಡಾ ವಿದ್ಯಾರ್ಥಿ ಗಳನ್ನು ಕುರಿತು ಶಿಕ್ಷಣದ ಜೊತೆಗೆ ಕ್ರೀಡೆ ಯು ದೈಹಿಕ ಹಾಗೂ ಮಾನಸಿಕ ಸ್ಥಿರವನ್ನು ಹೆಚ್ಚಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದರು. ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಕ್ರೀಡಾ ನಿರ್ದೇಶಕ ಹಾಗೂ ಮುಖ್ಯಸ್ಥರಾದ ರಮೇಶ್. ಹೆಚ್ ಉಪಸ್ಥಿತರಿದ್ದರು.


ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತರಬೇತುದಾರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಕರಾದ ಸುದೀನ ಸ್ವಾಗತಿಸಿ, ಸ್ಪೋರ್ಟ್ಸ್ ಕ್ಲಬ್ ನ ವಿದ್ಯಾರ್ಥಿ ಕಾರ್ತಿಕ್ ವಂದಿಸಿದರು.

Related posts

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya
error: Content is protected !!