September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕೊಕ್ಕಡ :ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಕೊಕ್ಕಡದ ಸಂತ ಫ್ರಾನ್ಸಿಸ್ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು.


ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂತ ಫ್ರಾನ್ಸಿಸ್ ಸಮೂಹ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಬ್ರದರ್ ಜೋಸೆಫ್, ಪ್ರತಿಭಾ ಕಾರಂಜಿ ತಾಲೂಕು ನೋಡಲ್ ಅಧಿಕಾರಿ ಶ್ರೀಮತಿ ಚೇತನಾಕ್ಷಿ, ಸಿ ಆರ್ ಪಿ ವಿಲ್ಫ್ರೆಡ್ ಪಿಂಟೋ, ರಕ್ಷಕ ಶಿಕ್ಷಕ ಸಂಘದ ಜಯೇಶ್ ಪ್ರಿನ್ಸಿಪಾಲ್, ವಂದನಿಯ ಫಾ. ರೊಯ್ ಕಪ್ಪುಚಿನ್, ಫಾ ಅರುಣ್. ಫಾ. ಬಿಪಿನ್, ಮುಖ್ಯೋಪಾಧ್ಯಾಯಿನಿ ವಂ. ಸಿ| ಚೈತನ್ಯ ಮೊದಲಾದವರು ಉಪಸ್ಥಿತರಿದ್ದರು.

ಸುಮಾರು 18 ಪ್ರೌಢ ಶಾಲೆಗಳಿಂದ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

Related posts

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಬೆಳ್ತಂಗಡಿ: ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧಿ ತಜ್ಞರ ಹಾಗೂ ವಾರ್ಷಿಕ ದಿನಾಚರಣೆ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya
error: Content is protected !!