23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್‌ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
‌ ಆ.23 ರಂದು ಜರುಗಿದ ಬೆಳ್ತಂಗಡಿಯಲ್ಲಿ ನಡೆದ “ಕುಂದು ಕೊರತೆಗಳ ಅಹವಾಲು ಸ್ವೀಕಾರ” ಕಾರ್ಯಕ್ರಮದಲ್ಲಿ ಈ ಮನವಿಯನ್ನು ನೀಡಿದಾಗ ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.


ಸಾರ್ವಜನಿಕ ವಿಚಾರದ ಫ್ಲಾಟಿಂಗ್ ಸಮಸ್ಯೆ, ರಸ್ತೆ ಸಮಸ್ಯೆ, ಇನ್ನಿತರ ಮೂಲಭೂತ ಸೌಕರ್ಯಗಳ ರಚನಾತ್ಮಕ ಅರ್ಜಿ ಸ್ವೀಕರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಸಂವಾದ ನಡೆಸಿ, ಸೂಕ್ತ ಪರಿಹಾರಕ್ಕೆ ಸಲಹೆ ನೀಡಿದ್ದಾರೆ.


ಕೆಲವರು ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಯವರ ಬಳಿಯಲ್ಲಿ ತಮ್ಮ ಅಳಳು ಹೇಳಿದಾಗ ಈ ವಿಚಾರ ಕಾನೂನು ವ್ಯಾಪ್ತಿಯಲ್ಲಿ ಜರುಗಬೇಕಾಗುವುದರಿಂದ ಇಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿ ಸಾವಧಾನವಾಗಿ ಜನರಿಗೆ ಸಲಹೆ ಸೂಚನೆ ನೀಡುತ್ತಿದ್ದ ವಿಚಾರ ಪ್ರಶಂಸರ್ಹವಾಗಿತ್ತು.
ಅಲ್ಲದೆ ಜಿಲ್ಲಾಧಿಕಾರಿಯವರ ಈ ಭೇಟಿಯಿಂದ ಕಡತ ವಿಲೇವಾರಿ ಕಾರ್ಯಕ್ರಮಕ್ಕೆ ವೇಗ ಬರಲು ಸಹಾಯವಾಗಿದ್ದು, ತಾಲೂಕು ಆಡಳಿತದಲ್ಲಿ ಹೊಸ ಹುರುಪಿಗೆ ಕಾರಣವಾಗಿ, ಸಾರ್ವಜನಿಕರಿಗೆ ಇಂತಹ ಕಾರ್ಯಕ್ರಮ ಅನುಕೂಲವಾಗಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಲಹೆಗಾರ ವೃಷಭ ಆರಿಗಾ, ತಾಲೂಕು ಕಾರ್ಯದರ್ಶಿ ಕೃಷ್ಣ ಉಪಸ್ಥಿತರಿದ್ದರು.

Related posts

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!