25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

ಬೆಳ್ತಂಗಡಿ: ಸೆ.3ರಂದು ಬೆಳ್ತಂಡಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಈಗಾಗಲೇ ನ್ಯಾಯಾಲಯಗಳು ಮಾಡಿರುವ ಆದೇಶವನ್ನು ಉಲ್ಲಂಘಿಸದಂತೆ ಹಾಗೂ ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕಿನ ಸಮಾನ ಮನಸ್ಕ ಶಾಂತಿಪ್ರಿಯ ನಾಗರಿಕರು ಸೆ.1ರಂದು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಜೊತೆಗೆ ಕು| ಸೌಜನ್ಯಾಳ ಅಸಹಜ ಸಾವಿನ ಬಗ್ಗೆ ಅವರ ಕುಟುಂಬದ ಬೇಡಿಕೆಯಂತೆ ಹೆಚ್ಚುವರಿ ತನಿಖೆಯನ್ನು ನಡೆಸುವಂತೆ ಸಮಾಜ ಮನಸ್ಕರು ಮನವಿಯಲ್ಲಿ ಸರಕಾರವನ್ನು ಒತ್ತಾಯಿಸಿದ್ದಾರೆ. ಮನವಿಯನ್ನು ಉಜಿರೆ ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ ತಹಸೀಲ್ದಾರರಿಗೆ ನೀಡಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಧನಂಜಯ ರಾವ್, ಉಜಿರೆ ಅಶೋಕ್ ಭಟ್, ಶಶಿಕಿರಣ್ ಜೈನ್, ಡಾ.ಎಮ್.ಎಮ್.ದಯಾಕರ್, ಇಚ್ಚಿಲ ಸುಂದರ ಗೌಡ, ಯೋಗೀಶ್ ಕುಮಾರ್ ನಡಕರ, ಅನಂತಕೃಷ್ಣ ಮಚ್ಚಿಮಲೆ, ಜಯಂತ ಶೆಟ್ಟಿ ಮಡಂತ್ಯಾರ್, ರಾಘವೇಂದ್ರ ಬೈಪಡಿತ್ತಾಯ ಹಾಗೂ ಬೆಳ್ತಂಗಡಿ, ಉಜಿರೆ ಪರಿಸರದ ಗಣ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya
error: Content is protected !!