25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

ಬೆಳ್ತಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದರು ಎಂಬ ಆರೋಪದಲ್ಲಿ 2018ನೇ ಇಸವಿಯಲ್ಲಿ ಉಜಿರೆ ಗ್ರಾಮದ ಕಾಶಿಬೆಟ್ಟು ಬಳಿ ಪೊಲೀಸ್ ಪೇದೆ ಹರೀಶ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿ ಧರ್ಮಸ್ಥಳ ಗ್ರಾಮದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಎಂಬವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 353 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಾಗಿ ಅಂದಿನ ಪೊಲೀಸ್ ಉಪ ನಿರೀಕ್ಷಕರು ಆಗಿದ್ದ ನಂದಕುಮಾರ್ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಬಿಜಿ ರವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಆರೋಪಿಗಳ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ತೀರ್ಪು ನೀಡಿ ಇಂದು ಸೆ.1ರಂದು ಆರೋಪಿಗಳನ್ನು ಖುಲಾಸೆಗೊಳಿಸಿದರು. ಆರೋಪಿಗಳ ಪರವಾಗಿ ಬೆಳ್ತಂಗಡಿಯ ನ್ಯಾಯವಾದಿ ಕೇಶವ ಗೌಡ ಪಿ ರವರು ವಾದಿಸಿದ್ದರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!