September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

ಬೆಳ್ತಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದರು ಎಂಬ ಆರೋಪದಲ್ಲಿ 2018ನೇ ಇಸವಿಯಲ್ಲಿ ಉಜಿರೆ ಗ್ರಾಮದ ಕಾಶಿಬೆಟ್ಟು ಬಳಿ ಪೊಲೀಸ್ ಪೇದೆ ಹರೀಶ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿ ಧರ್ಮಸ್ಥಳ ಗ್ರಾಮದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಎಂಬವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 353 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಾಗಿ ಅಂದಿನ ಪೊಲೀಸ್ ಉಪ ನಿರೀಕ್ಷಕರು ಆಗಿದ್ದ ನಂದಕುಮಾರ್ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್ ಬಿಜಿ ರವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಆರೋಪಿಗಳ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ತೀರ್ಪು ನೀಡಿ ಇಂದು ಸೆ.1ರಂದು ಆರೋಪಿಗಳನ್ನು ಖುಲಾಸೆಗೊಳಿಸಿದರು. ಆರೋಪಿಗಳ ಪರವಾಗಿ ಬೆಳ್ತಂಗಡಿಯ ನ್ಯಾಯವಾದಿ ಕೇಶವ ಗೌಡ ಪಿ ರವರು ವಾದಿಸಿದ್ದರು.

Related posts

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!