22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ಬೆಳ್ತಂಗಡಿ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮವನ್ನು  ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ದಯಾಮಣಿ  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ ಅಧ್ಯಕ್ಷತೆ ವಹಿಸಿದ್ದರು .ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕಿನ ವ್ಯವಸ್ಥಾಪಕ ಅನಂತಕೃಷ್ಣ ಭಟ್, ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಸರಕಾರಿ ಪ್ರೌಢಶಾಲೆ ಪೆರ್ಲಬೈಪಾಡಿ ಶಾಲ ಮುಖ್ಯೋಪಾಧ್ಯಯ ಬಾಲಕೃಷ್ಣ ಕೊರಮೇರು, ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ಶಿವಪುತ್ರ ಸುಣಗಾರ , ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಬಾಲಕೃಷ್ಣ  ಬೇರಿಕೆ, ಪಂಚಾಯತ್ ಸದಸ್ಯರಾದ ಯಶವಂತ ಗೌಡ, ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಸ್ವಾಗತಿಸಿದರು. ಪ್ರವೀಣ್ ಕುಮಾರ್ ವಂದಿಸಿದರು. ರಾಮಚಂದ್ರ ದೊಡಮನಿ ನಿರೂಪಿಸಿದರು. ಶಾಲಾ ಸಮಗ್ರ ಪ್ರಥಮ ಪ್ರಶಸ್ತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ  ಹಾಗೂ ದ್ವಿತೀಯ ಸ್ಥಾನವನ್ನು  ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಹಾಗೂ ಸೈಂಟ್ ಸಾವಿಯೋ ಪ್ರೌಢಶಾಲೆ ಬೆಂದ್ರಾಳ ಪಡೆದುಕೊಂಡರು

Related posts

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!