25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

ಬೆಳ್ತಂಗಡಿ :ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ 2 ನೇ ದಿನದ ಅಂಗವಾಗಿ ಭಕ್ತಿ ರಸಂಮಜರಿ ನಡೆಯಿತು.

ನಂತರ ನಡೆದ ಧಾರ್ಮಿಕ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ವಹಿಸಿದ್ದರು.

ನಿವೃತ್ತ ಪ್ರಾಂಶುಪಾಲರಾದ ಎ.ಕೃಷ್ಣಪ್ಪ ಪೂಜಾರಿಯವರು ಧಾರ್ಮಿಕ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಸ್ವಾಮಿ ಪ್ರಸಾದ್ ಕನ್ಸ್ಟ್ರಕ್ಷನ್ ಮಾಲಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಡ್ ಮಚ್ಚಿಮಲೆ,ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ,ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರ ಮಂಜುನಾಥ ರೈ ಬೆಳ್ತಂಗಡಿ, ಶ್ರೀ ರಾಘವೇಂದ್ರ ಸೇವಾ ಟ್ರಸ್ಟ್ ಕೋಶಾಧಿಕಾರಿ ವಸಂತ ಸುವರ್ಣ, ಉಪಾಧ್ಯಕ್ಷ ಮಹಾಬಲ ಶೆಟ್ಟಿ ಉಪಸ್ಥಿತರಿದ್ದರು.

ನಿರಂತರ ಧಾರ್ಮಿಕ, ವೈದಿಕ, ಭಕ್ತಿ ರಸಮಂಜರಿ, ಭಜನೆ ಕಾರ್ಯಕ್ರಮಗಳು ನಡೆಯುತ್ತಿದ್ದು, ಪತ್ರಕರ್ತ ಹೃಷಿಕೇಶ್ ಧರ್ಮಸ್ಥಳ ರವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರಿ ರಾಘವೇಂದ್ರ ಪ್ರತಿಷ್ಠಾನದ ಪ್ರಮುಖರಾದ ಕೆ.ವಸಂತ ಬಂಗೇರ, ಶೇಖರ ಬಂಗೇರ,ಕೆ.ಶಂಕರ ಹೆಗ್ಡೆ,ವಿಶ್ವನಾಥ ಆರ್ ನಾಯಕ್,ಜಿ.ಸೋಮೇ ಗೌಡ,ಮೋಹನ್ ರಾವ್ ಉಜಿರೆ,ಮುರಳೀಧರ ರಾವ್,ತಿಮ್ಮಪ್ಪ ಗೌಡ ಪೆರ್ಮಾಣು,ರಾಘ್ನೇಶ್ ಬೆಳ್ತಂಗಡಿ, ನಿಖಿಲ್ ಪೈ ಬೆಳ್ತಂಗಡಿ, ಶ್ರವಣ್ ರಾಜ್ ಹೇರಾಜೆ,ಪ್ರಧಾನ ಆರ್ಚಕ ರಾಘವೇಂದ್ರ ಭಾಂಗಿಣ್ಣಾಯ ಕುಂಠಿಣಿ,ಬಿ.ಎ ಕುಮಾರ ಹೆಗ್ಡೆ ಸಹಕರಿಸಿದರು.

ಇತ್ತೀಚೆಗೆ ನಿಧನರಾದ ಸ್ಪಂದನಾ ವಿಜಯ ರಾಘವೇಂದ್ರರವರಿಗೆ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!