23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

ಮುಂಡಾಜೆ: ಮುಂಡಾಜೆ ಗ್ರಾ.ಪಂ. ನೇತೃತ್ವದಲ್ಲಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾ.ಪಂ. ಬೆಳ್ತಂಗಡಿ ಹಾಗೂ ಮುಂಡಾಜೆ ಪ್ಯಾಕ್ಸ್ ಸಹಭಾಗಿತ್ವದಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.

ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ನೂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಮಳೆ ಅಭಾವ ಚಿಂತೆಯ ವಿಚಾರವಾಗಿದೆ. ಈಗಲೇ ಹಲವೆಡೆ ನೀರು ಬತ್ತುತ್ತಿದೆ. ನೀರನ್ನು ಮಿತವಾಗಿ ಬಳಸುವುದು ಅಗತ್ಯ. ನಮ್ಮ ಪರಿಸರದ ಏರುಪೇರು, ಅರಣ್ಯ ನಾಶ, ಗಣಿಗಾರಿಕೆ ಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ.
ವಾಣಿಜ್ಯ ಬೆಳೆಗಳಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಗದ್ದೆ ಬೇಸಾಯ ಕಡಿಮೆ ಆಗುತ್ತಿದ್ದು ಇದು ಕೂಡ ನೀರಿನ ಕೊರತೆಗೆ ಕಾರಣವಾಗುತ್ತಿದೆ” ಎಂದು ಹೇಳಿದರು.

ಗ್ರಾ.ಪಂ. ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ “ನೀರಿನ ಕುರಿತ ಜಾಗೃತಿ ಈಗಿನಿಂದಲೇ ಮೂಡಿದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಿನ ಅಭಾವ ಕಂಡು ಬರದು. ನೀರು ಉಳಿಸುವ ಕುರಿತು ಹೆಚ್ಚಿನ ಕಾರ್ಯಕ್ರಮಗಳು ನಡೆಯಬೇಕು, ಗ್ರಾಮಸ್ಥರಿಗೆ ಇದರ ಅರಿವು ಮೂಡುವುದು ಮುಖ್ಯ”ಎಂದರು.

ಉಪಾಧ್ಯಕ್ಷೆ ಸುಮಲತಾ, ಮುಂಡಾಜೆ ಪ್ಯಾಕ್ಸ್ ಸಿಇಒ ಚಂದ್ರಕಾಂತ ಪ್ರಭು ಉಪಸ್ಥಿತರಿದ್ದರು. ಹಿರಿಯ ಕೃಷಿಕ, ನಿವೃತ್ತ ಶಿಕ್ಷಕ ಗಜಾನನ ವಝೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ನೀರು ಉಳಿಸುವ, ಮಳೆ ನೀರು ಕೊಯ್ಲು ಹಾಗೂ ಬೆಳೆ ಸಮೀಕ್ಷೆ ಕುರಿತು ಮಾಹಿತಿ ನೀಡಿದರು. ಪಿಡಿಒ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.

Related posts

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!