23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

ಮುಂಡಾಜೆ: ಮುಂಡಾಜೆ ಗ್ರಾ.ಪಂ. ನೇತೃತ್ವದಲ್ಲಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾ.ಪಂ. ಬೆಳ್ತಂಗಡಿ ಹಾಗೂ ಮುಂಡಾಜೆ ಪ್ಯಾಕ್ಸ್ ಸಹಭಾಗಿತ್ವದಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.

ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ನೂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ “ಮಳೆ ಅಭಾವ ಚಿಂತೆಯ ವಿಚಾರವಾಗಿದೆ. ಈಗಲೇ ಹಲವೆಡೆ ನೀರು ಬತ್ತುತ್ತಿದೆ. ನೀರನ್ನು ಮಿತವಾಗಿ ಬಳಸುವುದು ಅಗತ್ಯ. ನಮ್ಮ ಪರಿಸರದ ಏರುಪೇರು, ಅರಣ್ಯ ನಾಶ, ಗಣಿಗಾರಿಕೆ ಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ.
ವಾಣಿಜ್ಯ ಬೆಳೆಗಳಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಗದ್ದೆ ಬೇಸಾಯ ಕಡಿಮೆ ಆಗುತ್ತಿದ್ದು ಇದು ಕೂಡ ನೀರಿನ ಕೊರತೆಗೆ ಕಾರಣವಾಗುತ್ತಿದೆ” ಎಂದು ಹೇಳಿದರು.

ಗ್ರಾ.ಪಂ. ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ “ನೀರಿನ ಕುರಿತ ಜಾಗೃತಿ ಈಗಿನಿಂದಲೇ ಮೂಡಿದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಿನ ಅಭಾವ ಕಂಡು ಬರದು. ನೀರು ಉಳಿಸುವ ಕುರಿತು ಹೆಚ್ಚಿನ ಕಾರ್ಯಕ್ರಮಗಳು ನಡೆಯಬೇಕು, ಗ್ರಾಮಸ್ಥರಿಗೆ ಇದರ ಅರಿವು ಮೂಡುವುದು ಮುಖ್ಯ”ಎಂದರು.

ಉಪಾಧ್ಯಕ್ಷೆ ಸುಮಲತಾ, ಮುಂಡಾಜೆ ಪ್ಯಾಕ್ಸ್ ಸಿಇಒ ಚಂದ್ರಕಾಂತ ಪ್ರಭು ಉಪಸ್ಥಿತರಿದ್ದರು. ಹಿರಿಯ ಕೃಷಿಕ, ನಿವೃತ್ತ ಶಿಕ್ಷಕ ಗಜಾನನ ವಝೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ನೀರು ಉಳಿಸುವ, ಮಳೆ ನೀರು ಕೊಯ್ಲು ಹಾಗೂ ಬೆಳೆ ಸಮೀಕ್ಷೆ ಕುರಿತು ಮಾಹಿತಿ ನೀಡಿದರು. ಪಿಡಿಒ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya
error: Content is protected !!