24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ತುಳುನಾಡ್ ಒಕ್ಕೂಟ ಸಂಘಟನೆಯ ಕಾರ್ಯಕರ್ತರ ಸಭೆಯು ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾದ ರಾಜೇಶ್ ಕುಲಾಲ್ ಬೈರೊಟ್ಟು ವಹಿಸಿದ್ದರು.

ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟ ಬೆಳ್ತಂಗಡಿ ತಾಲ್ಲೂಕು ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಆಕಾಶ್ ಪೂಜಾರಿ ಗೇರುಕಟ್ಟೆ , ಉಪಾಧ್ಯಕ್ಷರಾಗಿ ಪುರಂದರ ಗೌಡ ಶಿರ್ಲಾಲು, ಕಾರ್ಯದರ್ಶಿಯಾಗಿ ಚಂದ್ರಹಾಸ ಕುಂಬಾರ ಬಂದಾರು, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಸಾಲಿಯಾನ್, ಕೋಶಾಧಿಕಾರಿಯಾಗಿ ಅಶ್ವತ್ ಕುಲಾಲ್ ಅರ್ವ ಆಯ್ಕೆಯಾದರು ಮತ್ತು ಹತ್ತು ಜನರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸಂಘಟನೆಯ ಸಂಸ್ಥಾಪಕರಾದ ಶೈಲೇಶ್ ಆರ್. ಜೆ. ಯವರು ನೂತನ ಯುವ ಘಟಕಕ್ಕೆ ಸಂಘಟನೆಯ ಧ್ಯೇಯ, ಉದ್ದೇಶಗಳ ಬಗ್ಗೆ ವಿವರಿಸಿ, ತುಳು ಚಳುವಳಿಯನ್ನು ಮುಂದುವರಿಸುವ ರೀತಿ, ಪ್ರಾದೇಶಿಕ ಚಳುವಳಿ ಯಶಸ್ಸು ಆಗಲು ಯುವ ಘಟಕ ಯುವಜನತೆಯೊಂದಿಗೆ ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು ಮತ್ತು ನೂತನ ಯುವ ಘಟಕದ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾದ ರಾಜು ಬಿ. ಎಚ್. ಸ್ವಾಗತಿಸಿ ನಿರ್ವಹಿಸಿ ವಂದಿಸಿದರು. ತುಳುನಾಡ್ ಒಕ್ಕೂಟ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya
error: Content is protected !!