23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

ಉಜಿರೆ: ಗಣಿತಶಾಸ್ತ್ರವು ಎಲ್ಲಾ ಬಗೆಯ ತಾಂತ್ರಿಕ ಶಿಕ್ಷಣದ ಉಸಿರಾಗಿದೆ. ಯಾವುದೇ ಕ್ಷೇತ್ರದಲ್ಲಿಯೂ ಗಣಿತವು ಒಂದಲ್ಲ ಒಂದು ರೀತಿಯಲ್ಲಿ ಹಾಸುಹೊಕ್ಕಾಗಿದೆ ಎಂದು ಎಸ್.ಡಿ.ಯಂ. ತಾಂತ್ರಿಕ ಕಾಲೇಜು ಉಜಿರೆಯ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ರವರು ನುಡಿದರು.

ಅವರು ಸೆ.1ರಂದು ಎಸ್.ಡಿ.ಯಂ. ಕಾಲೇಜಿನ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಘಟನೆ ” ಸಿಗ್ಮಾ ಅಸೋಸಿಯೇಷನ್ ” ನ ಕಾರ್ಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಗಣೇಶ್ ನಾಯಕ್ ವಹಿಸಿದ್ದರು.

ಈ ಸಂದರ್ಭದಲ್ಲಿ ಡಾ. ಸುಬ್ರಹ್ಮಣ್ಯ ಭಟ್ಟರು ಗಣಿತ ವಿಭಾಗದ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಿ ಸಿಗ್ಮಾ ಅಸೋಸಿಯೇಷನ್ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು. ಬಳಿಕ “ಅಪ್ಲಿಕೇಷನ್ ಆಫ್ ಮ್ಯಾಥಮ್ಯಾಟಿಕ್ಸ್ ಇನ್ ಇಂಜಿನಿಯರಿಂಗ್” ವಿಚಾರದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು. ಸಭಾ ಕಾರ್ಯಕ್ರಮವನ್ನು ಕಾಲೇಜಿನ ಅಂತಿಮ ಬಿಯಸ್ಸಿ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಆಯೋಜಿಸಿ ನೆರವೇರಿಸಿದರು.

Related posts

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ತಾ| ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!