23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಬರೀ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ, ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು, ಪ್ರತಿ ವಾರದಲ್ಲಿ ಒಂದು ದಿನ ಕರಾಟೆ, ಯೋಗಾಸನ, ಸಂಗೀತ, ಡ್ಯಾನ್ಸ್, ಯಕ್ಷಗಾನ ತರಬೇತಿಗಳನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತಿದೆ.

ಅದೇ ರೀತಿ ಶಾಲಾ ಸಂಚಾಲಕ ಗಿರೀಶ್ ಕೆ.ಹೆಚ್. ಕಾರ್ಯನಿರ್ವಾಹಣಾಧಿಕಾರಿ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ ವಿಜ್ಞಾನ, ಪರಿಸರ, ಸಾಂಸ್ಕೃತಿಕ, ಗಣಿತ, ಎನ್‌ ಸಿಸಿ, ಸೇವಾದಳ ಹಲವಾರು ವಿಭಾಗಗಳಾಗಿ ವಿಂಗಡಿಸಲಾಯಿತು. ಆಯಾಯ ವಿಭಾಗಗಳಿಗೆ ನಾಯಕರನ್ನುಆಯ್ಕೆಮಾಡಿ, ಗುಂಪಿನ ಹೆಸರನ್ನುಚಾರ್ಟಿನ ಮೂಲಕ ಎಲ್ಲಾ ವಿದ್ಯಾರ್ಥಿಗಳ ಸಹಕಾರದಿಂದ ಉದ್ಘಾಟಿಸಲಾಯಿತು.

ವಿಭಾಗವಾರು ಶಿಕ್ಷಕರಾದಂತಹ ಗಣಿತ – ಶ್ವೇತ ಮತ್ತುಸಂಧ್ಯಾ, ವಿಜ್ಞಾನ- ವಿನಯ್ ಮತ್ತು ಸ್ವಾತಿ, ಎನ್‌ ಸಿಸಿ – ಸಂಗೀತ ಮತ್ತು ಮಧು, ಸೇವಾದಳ – ಶುಭ ಮತ್ತು ಪವಿತ್ರ, ಪರಿಸರ- ಸ್ವರ್ಣಲತಾ ಮತ್ತು ರೂಪಲತಾ, ಸಾಂಸ್ಕೃತಿಕ- ಸಪ್ನಾಜ್ ಮತ್ತುವೀಣಾ ಇವರು ಮಕ್ಕಳಿಗೆ ಪ್ರೋತ್ಸಾಹಿಸಿದರು .

Related posts

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya
error: Content is protected !!