22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

ವೇಣೂರು: ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ ಯುವಕನನ್ನು ಬಂಧಿಸಿರುವ ಘಟನೆ ಸೆ.1ರಂದು ನಿಟ್ಟಡೆ ಗ್ರಾಮದ ಕುಂಭಶ್ರೀ ಬಸ್ ನಿಲ್ದಾಣದ ಬಳಿ ನಡೆದಿದೆ. ಬಂಧಿತ ಆರೋಪಿ ಚಿಕ್ಕಮಗಳೂರು ನಿವಾಸಿ ಸಂತೋಷ್ (23ವ) ಎಂದು ಗುರುತಿಸಲಾಗಿದೆ.

ಸಂತೋಷ್ ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ. ವೇಣೂರು ಪೊಲೀಸ್ ಠಾಣಾ ಪೊಲೀಸರು ತಡೆದು ನಿಲ್ಲಿಸಿದಾಗ ಆತನು ಅಮಲಿನ ನಶೆಯಲ್ಲಿದ್ದಂತೆ ಕಂಡು ಬಂದಿದ್ದು, ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಪೊಲೀಸರು ಆತನನ್ನು ವಶಕ್ಕೆ ಪಡೆದು ವೈದ್ಯಾಧಿಕಾರಿಗಳಿಂದ ತಪಾಸಣೆಗೆ ಒಳಪಡಿಸಿದಾಗ ನಿಷೇದಿತ ವಸ್ತು ಗಾಂಜಾವನ್ನುಸೇವಿಸಿರುವುದು ದೃಢಪಟ್ಟಿದ್ದು, ಆರೋಪಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya
error: Content is protected !!