ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬಳಂಜ:ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಮಳೆಗಾಲದಲ್ಲಿ ನೀರಿನ ಸೆಳೆತಕ್ಕೆ ಶೇಕರಣೆಗೊಂಡ ಮರದ ದಿಮ್ಮಿಗಳು ಹಾಗೂ ಕಸ ಕಡ್ಡಿಗಳನ್ನು ಬಳಂಜ ಗ್ರಾಮ ಪಂಚಾಯತ್ ವತಿಯಿಂದ ತೆರವುಗೊಳಿಸಿ ನೀರು ಸುಸೂತ್ರವಾಗಿ ಹರಿಯಲು ಅವಕಾಶ ಮಾಡಿಕೊಡಲಾಯಿತು.

ಮಳೆಗಾಲದಲ್ಲಿ ಗುಡ್ಡ ಪ್ರದೇಶಗಳಲ್ಲಿ ಬರುವ ನೀರಿನಲ್ಲಿ ಮರದ ದಿಮ್ಮಿಗಳು ಬರುತ್ತಿದ್ದು ಪೆರಾಜೆಯ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡು ನೀರು ಸರಗವಾಗಿ ಹರಿಯಲು ಆಗುತ್ತಿರಲಿಲ್ಲ. ಇದನ್ನು ಮನಗಂಡ ಬಳಂಜ ಗ್ರಾಮ ಪಂಚಾಯತ್ ಶೀಘ್ರವಾಗಿ ತೆರವುಗೊಳಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ, ಪಂ.ಅ.ಅಧಿಕಾರಿ ಶ್ರೀನಿವಾಸ್, ಹಾಗೂ ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!