30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಕುರಿತು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಇತರ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಪೂರ್ವಭಾವಿ ಸಭೆ ನಡೆಸಿದರು.

ಈ ಸಭೆಯಲ್ಲಿ ನವರಾತ್ರಿ ಆಚರಣೆ ಹೊರತಾಗಿ ದೇವಸ್ಥಾನದ ಖರ್ಚು ವೆಚ್ಚಗಳ ಬಗ್ಗೆ ಚೌತಿಯ ವ್ಯವಸ್ಥೆಯ ಬಗ್ಗೆ ನೂತನವಾಗಿ ನಿರ್ಮಿಸಲ್ಪಡುವ ಸಮುದಾಯ ಭವನದ ಕಾಮಗಾರಿಯ ಬಗ್ಗೆ ಹಾಗೂ ದೇವಳದ ಜಮೀನಿನ ಕೃಷಿ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು.

ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯಕ್, ಕೃಷ್ಣಪ್ಪಗೌಡ ಬೆಂಗಳ, ಈಶ್ವರ ಶೆಟ್ಟಿಗಾರ್ ಬರಮೇಲು, ನಾರಾಯಣಗೌಡ ಪಡಂತಾಜೆ, ಸತೀಶ್ ಎಂ ಕೆ ಪತ್ತಿಮಾರು, ಶಾರದಾ ಪ್ರಕಾಶ್ ರಾವ್ ಅಜಿರಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಿವಾಕರ ಹೆಬ್ಬಾರ್, ಉಪಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಸ್ವಾಗತವನ್ನು ದೇವಳದ ಸಿಬ್ಬಂದಿಯಾದ ಶಕುಂತಲಾ ಮತ್ತು ಧನ್ಯವಾದ ಕೃಷ್ಣಪ್ಪ ಗೌಡ ಬೆಂಗಳ ನೆರವೇರಿಸಿದರು

Related posts

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya
error: Content is protected !!