25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಕುರಿತು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಇತರ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಪೂರ್ವಭಾವಿ ಸಭೆ ನಡೆಸಿದರು.

ಈ ಸಭೆಯಲ್ಲಿ ನವರಾತ್ರಿ ಆಚರಣೆ ಹೊರತಾಗಿ ದೇವಸ್ಥಾನದ ಖರ್ಚು ವೆಚ್ಚಗಳ ಬಗ್ಗೆ ಚೌತಿಯ ವ್ಯವಸ್ಥೆಯ ಬಗ್ಗೆ ನೂತನವಾಗಿ ನಿರ್ಮಿಸಲ್ಪಡುವ ಸಮುದಾಯ ಭವನದ ಕಾಮಗಾರಿಯ ಬಗ್ಗೆ ಹಾಗೂ ದೇವಳದ ಜಮೀನಿನ ಕೃಷಿ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು.

ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯಕ್, ಕೃಷ್ಣಪ್ಪಗೌಡ ಬೆಂಗಳ, ಈಶ್ವರ ಶೆಟ್ಟಿಗಾರ್ ಬರಮೇಲು, ನಾರಾಯಣಗೌಡ ಪಡಂತಾಜೆ, ಸತೀಶ್ ಎಂ ಕೆ ಪತ್ತಿಮಾರು, ಶಾರದಾ ಪ್ರಕಾಶ್ ರಾವ್ ಅಜಿರಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಿವಾಕರ ಹೆಬ್ಬಾರ್, ಉಪಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಸ್ವಾಗತವನ್ನು ದೇವಳದ ಸಿಬ್ಬಂದಿಯಾದ ಶಕುಂತಲಾ ಮತ್ತು ಧನ್ಯವಾದ ಕೃಷ್ಣಪ್ಪ ಗೌಡ ಬೆಂಗಳ ನೆರವೇರಿಸಿದರು

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya
error: Content is protected !!