ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಉಜಿರೆ : “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಉಳಿದ ಭಾಷೆಗಳು ಸಂಸ್ಕೃತದಿಂದ ಸಮುದ್ದರಣೆಗೊಂಡಿದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜು ಉಜಿರೆಯ ಸಂಸ್ಕೃತ ಪ್ರಾಧ್ಯಾಪಕ ಹಾಗೂ ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಶೀಧರ್ ಭಟ್ ಇವರು ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ಶ್ರೀಪ್ರಿಯ ಮತ್ತು ರಾಜರತ್ನ ಕಾರ್ಯಕ್ರಮ ನಿರೂಪಿಸಿದರು. ಸನ್ನಿಧಿ ಮತ್ತು ಕೃಷ್ಣಪ್ರಸಾದ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕಿ ಸುಜನಾ ವಾಲ್ತಾಜೆ ವಂದಿಸಿದರು.

Leave a Comment

error: Content is protected !!