23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ : “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಉಳಿದ ಭಾಷೆಗಳು ಸಂಸ್ಕೃತದಿಂದ ಸಮುದ್ದರಣೆಗೊಂಡಿದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜು ಉಜಿರೆಯ ಸಂಸ್ಕೃತ ಪ್ರಾಧ್ಯಾಪಕ ಹಾಗೂ ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಶೀಧರ್ ಭಟ್ ಇವರು ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ಶ್ರೀಪ್ರಿಯ ಮತ್ತು ರಾಜರತ್ನ ಕಾರ್ಯಕ್ರಮ ನಿರೂಪಿಸಿದರು. ಸನ್ನಿಧಿ ಮತ್ತು ಕೃಷ್ಣಪ್ರಸಾದ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕಿ ಸುಜನಾ ವಾಲ್ತಾಜೆ ವಂದಿಸಿದರು.

Related posts

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya
error: Content is protected !!