July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.3 ಸಂಘದ ಸಹಕಾರಿ ಸಭಾಭವನದಲ್ಲಿ ಜರುಗಿತು.

ಸಂಘದ ವಸಂತ ಮಜಲು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘವು ಪ್ರಸಕ್ತ ಸಾಲಿನಲ್ಲಿ ಈ ಸಾಲಿನಲ್ಲಿ 252.ಕೋಟಿ ವ್ಯವಹಾರ ನಡೆಸಿ, ರೂ.76.10ಲಕ್ಷ ನಿವ್ವಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ.16ಡಿವಿಡೆಂಡ್ ನೀಡುವುದಾಗಿ ಪೋಷಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ನಾಣ್ಯಪ್ಪ ಪೂಜಾರಿ, ನಿರ್ದೇಶಕರಾದ ಹರಿದಾಸ್ ಪಡಂತ್ತಾಯ, ದೇವಣ್ಣ ಮೂಲ್ಯ, ರಾಜೀವ ಗೌಡ, ರಾಜ್ ಪ್ರಕಾಶ್ ಶೆಟ್ಟಿ ಪಡ್ಡಾಯಿಲು, ರತ್ನಾಕರ, ಚಂದ್ರಾವತಿ, ಶಶಿಧರ ಶೆಟ್ಟಿ, ನೋಣಯ್ಯ, ಮಮತಾ ಹಾಗೂ ಸಂಘದ ಸರ್ವ ಸದಸ್ಯರು,ಡಿ.ಸಿ.ಸಿ. ಪ್ರತಿನಿಧಿ ಸಂದೇಶ. ಉಪಸ್ಥಿತರಿದ್ದರು.

ನಿರ್ದೇಶಕ ಶೇಖರ್ ನಾಯ್ಕ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಶಂಕರ್ ಕೆ.ಜೆ. ವಾರ್ಷಿಕ ವರದಿ ವಾಚಿಸಿದರು. ರಾಜೇಶ್ ಪೆಂರ್ಬಡ ಕಾರ್ಯಕ್ರಮ ನಿರೂಪಿಸಿ, ಸಿಬ್ಬಂದಿ ಸಂತೋಷ್ ಧನ್ಯವಾದವಿತ್ತರು.

Related posts

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!