23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಕುರಿತು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಇತರ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಪೂರ್ವಭಾವಿ ಸಭೆ ನಡೆಸಿದರು.

ಈ ಸಭೆಯಲ್ಲಿ ನವರಾತ್ರಿ ಆಚರಣೆ ಹೊರತಾಗಿ ದೇವಸ್ಥಾನದ ಖರ್ಚು ವೆಚ್ಚಗಳ ಬಗ್ಗೆ ಚೌತಿಯ ವ್ಯವಸ್ಥೆಯ ಬಗ್ಗೆ ನೂತನವಾಗಿ ನಿರ್ಮಿಸಲ್ಪಡುವ ಸಮುದಾಯ ಭವನದ ಕಾಮಗಾರಿಯ ಬಗ್ಗೆ ಹಾಗೂ ದೇವಳದ ಜಮೀನಿನ ಕೃಷಿ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು.

ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯಕ್, ಕೃಷ್ಣಪ್ಪಗೌಡ ಬೆಂಗಳ, ಈಶ್ವರ ಶೆಟ್ಟಿಗಾರ್ ಬರಮೇಲು, ನಾರಾಯಣಗೌಡ ಪಡಂತಾಜೆ, ಸತೀಶ್ ಎಂ ಕೆ ಪತ್ತಿಮಾರು, ಶಾರದಾ ಪ್ರಕಾಶ್ ರಾವ್ ಅಜಿರಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಿವಾಕರ ಹೆಬ್ಬಾರ್, ಉಪಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಸ್ವಾಗತವನ್ನು ದೇವಳದ ಸಿಬ್ಬಂದಿಯಾದ ಶಕುಂತಲಾ ಮತ್ತು ಧನ್ಯವಾದ ಕೃಷ್ಣಪ್ಪ ಗೌಡ ಬೆಂಗಳ ನೆರವೇರಿಸಿದರು

Related posts

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya
error: Content is protected !!