25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಕುರಿತು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಇತರ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿ ಪೂರ್ವಭಾವಿ ಸಭೆ ನಡೆಸಿದರು.

ಈ ಸಭೆಯಲ್ಲಿ ನವರಾತ್ರಿ ಆಚರಣೆ ಹೊರತಾಗಿ ದೇವಸ್ಥಾನದ ಖರ್ಚು ವೆಚ್ಚಗಳ ಬಗ್ಗೆ ಚೌತಿಯ ವ್ಯವಸ್ಥೆಯ ಬಗ್ಗೆ ನೂತನವಾಗಿ ನಿರ್ಮಿಸಲ್ಪಡುವ ಸಮುದಾಯ ಭವನದ ಕಾಮಗಾರಿಯ ಬಗ್ಗೆ ಹಾಗೂ ದೇವಳದ ಜಮೀನಿನ ಕೃಷಿ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು.

ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯಕ್, ಕೃಷ್ಣಪ್ಪಗೌಡ ಬೆಂಗಳ, ಈಶ್ವರ ಶೆಟ್ಟಿಗಾರ್ ಬರಮೇಲು, ನಾರಾಯಣಗೌಡ ಪಡಂತಾಜೆ, ಸತೀಶ್ ಎಂ ಕೆ ಪತ್ತಿಮಾರು, ಶಾರದಾ ಪ್ರಕಾಶ್ ರಾವ್ ಅಜಿರಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಿವಾಕರ ಹೆಬ್ಬಾರ್, ಉಪಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ಸ್ವಾಗತವನ್ನು ದೇವಳದ ಸಿಬ್ಬಂದಿಯಾದ ಶಕುಂತಲಾ ಮತ್ತು ಧನ್ಯವಾದ ಕೃಷ್ಣಪ್ಪ ಗೌಡ ಬೆಂಗಳ ನೆರವೇರಿಸಿದರು

Related posts

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ.

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya
error: Content is protected !!