September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ : “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಉಳಿದ ಭಾಷೆಗಳು ಸಂಸ್ಕೃತದಿಂದ ಸಮುದ್ದರಣೆಗೊಂಡಿದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜು ಉಜಿರೆಯ ಸಂಸ್ಕೃತ ಪ್ರಾಧ್ಯಾಪಕ ಹಾಗೂ ಕಲಾ ವಿಭಾಗದ ಮುಖ್ಯಸ್ಥರಾದ ಡಾ. ಶೀಧರ್ ಭಟ್ ಇವರು ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ‘ಆತ್ಮಾನಂ ಸಂಸ್ಕೃತಂ ಮನ್ಯೆ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಜಯ ಘೋಷಗಳೊಂದಿಗೆ ಮೆರವಣಿ, ಸಂಸ್ಕೃತ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕಿ ಶಾಂಟಿ ಜಾರ್ಜ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ಶ್ರೀಪ್ರಿಯ ಮತ್ತು ರಾಜರತ್ನ ಕಾರ್ಯಕ್ರಮ ನಿರೂಪಿಸಿದರು. ಸನ್ನಿಧಿ ಮತ್ತು ಕೃಷ್ಣಪ್ರಸಾದ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕಿ ಸುಜನಾ ವಾಲ್ತಾಜೆ ವಂದಿಸಿದರು.

Related posts

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!