September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಾಧಕರು

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ.ಈ ಬಾರಿಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಯಚೂರಿನ ಮಾನವಿಯ ಹರನಹಳ್ಳಿ ಸ.ಕಿ.ಪ್ರಾ ಶಾಲೆಗೆ 2002 ರಲ್ಲಿ ಶಿಕ್ಷಕರಾಗಿ ನೇಮಕಗೊಂಡು 2004ರಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಶಾಲೆಗೆ ವರ್ಗಾವಣೆಗೊಂಡರು. 2013ರಿಂದ ಮುಂಡಾಜೆ ಕ್ಲಸ್ಟರ್ ನ ಸಿಆರ್ ಪಿ ಯಾಗಿ ಸೇವೆ ಸಲ್ಲಿಸಿ, 2017ರಿಂದ ಮುಂಡೂರು ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಲ್ಲೇಲಿಂಗನಹಳ್ಳಿ ಹಾಲಮ್ಮ ಹಾಗೂ ಬಸಪ್ಪ ದಂಪತಿಯ ಪುತ್ರ.ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸಿಂಗಟಗೆರೆಯಲ್ಲಿ ಟಿಸಿಎಚ್ ತರಬೇತಿಯನ್ನು ಬೆಂಗಳೂರಿನಲ್ಲಿ ಪದವಿಯನ್ನು ಮೈಸೂರಲ್ಲಿ ಪೂರೈಸಿ, ದೆಹಲಿಯ ಐಜಿಎನ್ ಒಯು ನಿಂದ ಬಿ.ಎಡ್ ತರಬೇತಿ ಪಡೆದಿದ್ದಾರೆ.

ಸಿಆರ್‌ ಪಿ ಯಾಗಿ ಕರ್ತವ್ಯ ನಿರ್ವಹಿಸುವ ವೇಳೆ ಶಿಕ್ಷಕರಿಗೆ ಅನೇಕ ತರಬೇತಿಗಳನ್ನು ನೀಡಿ ದ್ದಾರೆ.ಮುಂಡೂರು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು ಶಾಲೆ ಕೊಠಡಿಗಳು ಸುಣ್ಣಬಣ್ಣ ಕಾಣದೆ ಹಲವು ವರ್ಷಗಳಾಗಿತ್ತು. ಇವರು ಪ್ರಭಾರ ಮುಖ್ಯ ಶಿಕ್ಷಕರಾಗಿ ನೇಮಕಗೊಂಡ ಬಳಿಕ ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿದ್ದು ಶಾಲೆಗೆ ಅನೇಕ ಮೂಲಭೂತ ಸೌಕರ್ಯಗಳು ದೊರಕಿವೆ.

ಇವರ ಪತ್ನಿ ಸುಧಾ ಕೂಡ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya
error: Content is protected !!