23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಾಧಕರು

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ.ಈ ಬಾರಿಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಯಚೂರಿನ ಮಾನವಿಯ ಹರನಹಳ್ಳಿ ಸ.ಕಿ.ಪ್ರಾ ಶಾಲೆಗೆ 2002 ರಲ್ಲಿ ಶಿಕ್ಷಕರಾಗಿ ನೇಮಕಗೊಂಡು 2004ರಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಶಾಲೆಗೆ ವರ್ಗಾವಣೆಗೊಂಡರು. 2013ರಿಂದ ಮುಂಡಾಜೆ ಕ್ಲಸ್ಟರ್ ನ ಸಿಆರ್ ಪಿ ಯಾಗಿ ಸೇವೆ ಸಲ್ಲಿಸಿ, 2017ರಿಂದ ಮುಂಡೂರು ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಲ್ಲೇಲಿಂಗನಹಳ್ಳಿ ಹಾಲಮ್ಮ ಹಾಗೂ ಬಸಪ್ಪ ದಂಪತಿಯ ಪುತ್ರ.ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸಿಂಗಟಗೆರೆಯಲ್ಲಿ ಟಿಸಿಎಚ್ ತರಬೇತಿಯನ್ನು ಬೆಂಗಳೂರಿನಲ್ಲಿ ಪದವಿಯನ್ನು ಮೈಸೂರಲ್ಲಿ ಪೂರೈಸಿ, ದೆಹಲಿಯ ಐಜಿಎನ್ ಒಯು ನಿಂದ ಬಿ.ಎಡ್ ತರಬೇತಿ ಪಡೆದಿದ್ದಾರೆ.

ಸಿಆರ್‌ ಪಿ ಯಾಗಿ ಕರ್ತವ್ಯ ನಿರ್ವಹಿಸುವ ವೇಳೆ ಶಿಕ್ಷಕರಿಗೆ ಅನೇಕ ತರಬೇತಿಗಳನ್ನು ನೀಡಿ ದ್ದಾರೆ.ಮುಂಡೂರು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು ಶಾಲೆ ಕೊಠಡಿಗಳು ಸುಣ್ಣಬಣ್ಣ ಕಾಣದೆ ಹಲವು ವರ್ಷಗಳಾಗಿತ್ತು. ಇವರು ಪ್ರಭಾರ ಮುಖ್ಯ ಶಿಕ್ಷಕರಾಗಿ ನೇಮಕಗೊಂಡ ಬಳಿಕ ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿದ್ದು ಶಾಲೆಗೆ ಅನೇಕ ಮೂಲಭೂತ ಸೌಕರ್ಯಗಳು ದೊರಕಿವೆ.

ಇವರ ಪತ್ನಿ ಸುಧಾ ಕೂಡ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!