22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಾಧಕರು

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ.ಈ ಬಾರಿಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಯಚೂರಿನ ಮಾನವಿಯ ಹರನಹಳ್ಳಿ ಸ.ಕಿ.ಪ್ರಾ ಶಾಲೆಗೆ 2002 ರಲ್ಲಿ ಶಿಕ್ಷಕರಾಗಿ ನೇಮಕಗೊಂಡು 2004ರಲ್ಲಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಶಾಲೆಗೆ ವರ್ಗಾವಣೆಗೊಂಡರು. 2013ರಿಂದ ಮುಂಡಾಜೆ ಕ್ಲಸ್ಟರ್ ನ ಸಿಆರ್ ಪಿ ಯಾಗಿ ಸೇವೆ ಸಲ್ಲಿಸಿ, 2017ರಿಂದ ಮುಂಡೂರು ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇವರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಲ್ಲೇಲಿಂಗನಹಳ್ಳಿ ಹಾಲಮ್ಮ ಹಾಗೂ ಬಸಪ್ಪ ದಂಪತಿಯ ಪುತ್ರ.ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸಿಂಗಟಗೆರೆಯಲ್ಲಿ ಟಿಸಿಎಚ್ ತರಬೇತಿಯನ್ನು ಬೆಂಗಳೂರಿನಲ್ಲಿ ಪದವಿಯನ್ನು ಮೈಸೂರಲ್ಲಿ ಪೂರೈಸಿ, ದೆಹಲಿಯ ಐಜಿಎನ್ ಒಯು ನಿಂದ ಬಿ.ಎಡ್ ತರಬೇತಿ ಪಡೆದಿದ್ದಾರೆ.

ಸಿಆರ್‌ ಪಿ ಯಾಗಿ ಕರ್ತವ್ಯ ನಿರ್ವಹಿಸುವ ವೇಳೆ ಶಿಕ್ಷಕರಿಗೆ ಅನೇಕ ತರಬೇತಿಗಳನ್ನು ನೀಡಿ ದ್ದಾರೆ.ಮುಂಡೂರು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು ಶಾಲೆ ಕೊಠಡಿಗಳು ಸುಣ್ಣಬಣ್ಣ ಕಾಣದೆ ಹಲವು ವರ್ಷಗಳಾಗಿತ್ತು. ಇವರು ಪ್ರಭಾರ ಮುಖ್ಯ ಶಿಕ್ಷಕರಾಗಿ ನೇಮಕಗೊಂಡ ಬಳಿಕ ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿದ್ದು ಶಾಲೆಗೆ ಅನೇಕ ಮೂಲಭೂತ ಸೌಕರ್ಯಗಳು ದೊರಕಿವೆ.

ಇವರ ಪತ್ನಿ ಸುಧಾ ಕೂಡ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!