25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

ಉಜಿರೆ : ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು  ಕಳೆದ ಆರ್ಥಿಕ ವರ್ಷದಲ್ಲಿ 1811 ಸದಸ್ಯರನ್ನು ಹೊಂದಿದ್ದು,  76.57 ಕೋಟಿ ರೂ. ವ್ಯವಹಾರ ನಡೆಸಿದೆ. ಸದ್ರಿ ವಾರ್ಷಿಕ ಸಾಲಿನಲ್ಲಿ 39 ಲಕ್ಷ ರೂ. ಲಾಭ  ಗಳಿಸಿದ್ದು, ಸದಸ್ಯರಿಗೆ ಶೇ.8 ಡಿವಿಡೆಂಟ್ ಘೋಷಣೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ತಿಳಿಸಿದರು.


 ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭನದಲ್ಲಿ ಸೆ.3 ರಂದು ನಡೆದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದಲ್ಲಿ ಜನರು ವಿಶ್ವಾಸ ಇರಿಸಿ ವ್ಯವಹಾರಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಸಂಘವು ಒಟ್ಟು 11.87 ಕೋ.ರೂ. ವಿವಿಧ ಠೇವಣಿ ಹೊಂದಿದೆ. ಸಂಘದ ಅರಸಿನಮಕ್ಕಿ ಶಾಖೆ  ಸೆ.29ರಂದು ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು  ಅವರು ವಿನಂತಿಸಿಕೊಂಡರು .

ಸಂಘದ ಉಪಾಧ್ಯ ಕ್ಷ ಸುಂದರ ಗೌಡ ಇಚ್ಚಿಲ, ನಿರ್ದೇಶಕರಾದ ಕೆ.ಗಂಗಾಧರ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ಎನ್.ಲಕ್ಷಣ ಗೌಡ, ಶಿವಕಾಂತ ಗೌಡ, ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ವಾರ್ಷಿಕ ವರದಿ ಮಂಡಿಸಿ ಅನುಮೋದಿಸಲಾಯಿತು . ನಿರ್ದೇಶಕಿ ಚೇತನಾ ಚಂದ್ರಶೇಖರ್ ಧರ್ಮದಕಳ ಸ್ವಾಗತಿಸಿ, ನಿರ್ದೇಶಕಿ ಸರೋಜಿನಿ ವಿಜಯ ಕುಮಾರ್ ಗೌಡ ವಂದಿಸಿದರು. ಸಿಬಂದಿ ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya
error: Content is protected !!