ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ನಾರಾವಿ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡಬಿದಿರೆ ಇದರ ವತಿಯಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಶಾಲಾ ಔಷಧಿ ವನ ಕಾರ್ಯಕ್ರಮವನ್ನು ಸೆ.1 ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಎ. ವಹಿಸಿದರು.

ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಿ, ಮೂಡಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಧ್ಯಪಕರು ಡಾ. ಸುಬ್ರಹ್ಮಣ್ಯ ಪದ್ಯಾಣ ದಿಕ್ಸೂಚಿ ಭಾಷಣ ಮಾಡಿದರು.

ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಶಶಿಕಲಾ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಸಣಾ ಶಿಬಿರ ನಡೆಸಲಾಯಿತು.

ನಂತರ ಔಷಧಿಗೆ ಸಂಬಂಧಪಟ್ಟ ಸಸ್ಯಗಳ ಸೈಲ್ಡ್ ಸೋ ನಡೆಸಲಾಯಿತು. ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳಿಂದ ಔಷಧಿಯ ಗಿಡಗಳನ್ನು ನೆಡಲಾಯಿತು.

Leave a Comment

error: Content is protected !!