April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

ಉಜಿರೆ : ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು  ಕಳೆದ ಆರ್ಥಿಕ ವರ್ಷದಲ್ಲಿ 1811 ಸದಸ್ಯರನ್ನು ಹೊಂದಿದ್ದು,  76.57 ಕೋಟಿ ರೂ. ವ್ಯವಹಾರ ನಡೆಸಿದೆ. ಸದ್ರಿ ವಾರ್ಷಿಕ ಸಾಲಿನಲ್ಲಿ 39 ಲಕ್ಷ ರೂ. ಲಾಭ  ಗಳಿಸಿದ್ದು, ಸದಸ್ಯರಿಗೆ ಶೇ.8 ಡಿವಿಡೆಂಟ್ ಘೋಷಣೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ತಿಳಿಸಿದರು.


 ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭನದಲ್ಲಿ ಸೆ.3 ರಂದು ನಡೆದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದಲ್ಲಿ ಜನರು ವಿಶ್ವಾಸ ಇರಿಸಿ ವ್ಯವಹಾರಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಸಂಘವು ಒಟ್ಟು 11.87 ಕೋ.ರೂ. ವಿವಿಧ ಠೇವಣಿ ಹೊಂದಿದೆ. ಸಂಘದ ಅರಸಿನಮಕ್ಕಿ ಶಾಖೆ  ಸೆ.29ರಂದು ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು  ಅವರು ವಿನಂತಿಸಿಕೊಂಡರು .

ಸಂಘದ ಉಪಾಧ್ಯ ಕ್ಷ ಸುಂದರ ಗೌಡ ಇಚ್ಚಿಲ, ನಿರ್ದೇಶಕರಾದ ಕೆ.ಗಂಗಾಧರ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ಎನ್.ಲಕ್ಷಣ ಗೌಡ, ಶಿವಕಾಂತ ಗೌಡ, ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ವಾರ್ಷಿಕ ವರದಿ ಮಂಡಿಸಿ ಅನುಮೋದಿಸಲಾಯಿತು . ನಿರ್ದೇಶಕಿ ಚೇತನಾ ಚಂದ್ರಶೇಖರ್ ಧರ್ಮದಕಳ ಸ್ವಾಗತಿಸಿ, ನಿರ್ದೇಶಕಿ ಸರೋಜಿನಿ ವಿಜಯ ಕುಮಾರ್ ಗೌಡ ವಂದಿಸಿದರು. ಸಿಬಂದಿ ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!