September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

ಉಜಿರೆ : ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು  ಕಳೆದ ಆರ್ಥಿಕ ವರ್ಷದಲ್ಲಿ 1811 ಸದಸ್ಯರನ್ನು ಹೊಂದಿದ್ದು,  76.57 ಕೋಟಿ ರೂ. ವ್ಯವಹಾರ ನಡೆಸಿದೆ. ಸದ್ರಿ ವಾರ್ಷಿಕ ಸಾಲಿನಲ್ಲಿ 39 ಲಕ್ಷ ರೂ. ಲಾಭ  ಗಳಿಸಿದ್ದು, ಸದಸ್ಯರಿಗೆ ಶೇ.8 ಡಿವಿಡೆಂಟ್ ಘೋಷಣೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ತಿಳಿಸಿದರು.


 ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭನದಲ್ಲಿ ಸೆ.3 ರಂದು ನಡೆದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದಲ್ಲಿ ಜನರು ವಿಶ್ವಾಸ ಇರಿಸಿ ವ್ಯವಹಾರಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಸಂಘವು ಒಟ್ಟು 11.87 ಕೋ.ರೂ. ವಿವಿಧ ಠೇವಣಿ ಹೊಂದಿದೆ. ಸಂಘದ ಅರಸಿನಮಕ್ಕಿ ಶಾಖೆ  ಸೆ.29ರಂದು ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು  ಅವರು ವಿನಂತಿಸಿಕೊಂಡರು .

ಸಂಘದ ಉಪಾಧ್ಯ ಕ್ಷ ಸುಂದರ ಗೌಡ ಇಚ್ಚಿಲ, ನಿರ್ದೇಶಕರಾದ ಕೆ.ಗಂಗಾಧರ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ಎನ್.ಲಕ್ಷಣ ಗೌಡ, ಶಿವಕಾಂತ ಗೌಡ, ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ವಾರ್ಷಿಕ ವರದಿ ಮಂಡಿಸಿ ಅನುಮೋದಿಸಲಾಯಿತು . ನಿರ್ದೇಶಕಿ ಚೇತನಾ ಚಂದ್ರಶೇಖರ್ ಧರ್ಮದಕಳ ಸ್ವಾಗತಿಸಿ, ನಿರ್ದೇಶಕಿ ಸರೋಜಿನಿ ವಿಜಯ ಕುಮಾರ್ ಗೌಡ ವಂದಿಸಿದರು. ಸಿಬಂದಿ ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya
error: Content is protected !!