September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ಕಾನೂನು ಸಲಹೆ ಪಡೆಯುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ,ಹರೀಶ್ ಪೂಂಜ,ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ್ ಕಾಮತ್ ,ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಉಪಸ್ಥಿತರಿದ್ದರು.

Related posts

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya
error: Content is protected !!