23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಹಿಂದುರುಗುತ್ತಿದ್ದ ತನಗೆ ಹಲ್ಲೆ ನಡೆಸಿ, ಅವಾಚ್ಯಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದರೆಂದು ಆರೋಪಿಸಿ, ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್ ನಾಯ್ಕ (50ವ) ಎಂಬವರು ನೀಡಿದ ದೂರಿನ ಹಿನ್ನಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಸೆ.3 ರಂದು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿ ತಾನು ವಾಪಾಸು ತನ್ನ ಮನೆಗೆ ಬರುತ್ತಾ ಸಂಜೆ ಸಮಯ ಉಜಿರೆ ಗ್ರಾಮದ ಪಾಣೆಯಾಲು ಎ೦ಬಲ್ಲಿಗೆ ತಲುಪಿದಾಗ ಆರೋಪಿಗಳು ಕಾರಿನಲ್ಲಿ ಬಂದು ಅಡ್ಡವಾಗಿ ನಿಲ್ಲಿಸಿ, ಅಕ್ರಮ ಕೂಟ ಸೇರಿಕೊಂಡ ಮಹೇಶ್ ಶೆಟ್ಟಿ ತಿಮರೋಡಿ, ಮೋಹನ್ ಶೆಟ್ಟಿ ಪಾಣಿಯಾಲು, ಮುಖೇಶ್ ಶೆಟ್ಟಿ, ಪ್ರಜ್ವಲ್ ವಿ. ಗೌಡ, ನೀತು ಶೆಟ್ಟಿ ಪಾಣಿಯಾಲು, ಮತ್ತು ಪ್ರಮೋದ್ ಶೆಟ್ಟಿ ಇತರರು ನನಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ನನ್ನನ್ನು ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಕಲ್ಲಿನಿಂದ ಹಲ್ಲೆ ನಡೆಸಿದಾಗ, ನಾನು ಜೋರಾಗಿ ಬೊಬ್ಬೆ ಹೊಡೆದಿದ್ದು, ಹತ್ತಿರ ಮನೆಯಲಿದ್ದ ನನ್ನ ಪತ್ನಿ ಮಮತಾ ಓಡಿ ಬಂದಾಗ, ಪ್ರಮೋದ್ ಶೆಟ್ಟಿ ಎಂಬಾತ ಅವಳಿಗೂ ಕಲ್ಲಿನಿಂದ ಹೊಡೆದರು ಆಗ ಇಬ್ಬರೂ ಜೋರಾಗಿ ಬೊಬ್ಬೆ ಹೊಡೆಯುತ್ತಿದ್ದಾಗ ಅಲ್ಲಿಯೇ ಬರುತ್ತಿದ್ದ ಪರಿಚಯದ ಜಯಪ್ರಕಾಶ್ ಶೆಟ್ಟಿ, ಶಂಕರ ಶೆಟ್ಟಿ ತಿಮರೋಡಿ, ಸುರೇಶ್ ನಾಯ್ಕ ಮತ್ತು ಇತರರನ್ನು ನೋಡಿ ಆರೋಪಿಗಳು ಹಲ್ಲೆಗೆ ಬಳಸಿದ ಕಲ್ಲನ್ನು ಸ್ಥಳದಲ್ಲಿ ಬಿಸಾಡಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಭಾಸ್ಕರ ನಾಯ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಭಾಸ್ಕರ್ ನಾಯ್ಕ ಅವರು ಆಸ್ಪತ್ರೆಗೆ ದಾಖಲಾಗಿ ಈ ದೂರನ್ನು ನೀಡಿದ್ದಾರೆ. ಯೂ ಟ್ಯೂಬ್ ಚಾನಲ್‌ನಲ್ಲಿ, ಸಂದರ್ಶನ ನೀಡಿದ ಕಾರಣಕ್ಕೆ ಆರೋಪಿಗಳು ಈ ಕೃತ್ಯ ಎಸಗಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!