25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

ಅರಸಿನಮಕ್ಕಿ: ಅರಸಿನಮಕ್ಕಿಯ ಶುಭರಾಮ್ ಕಾಂಪ್ಲೆಕ್ಸ್ ನಲ್ಲಿರುವ “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆಯು ಸೆ.4 ರಂದು ನಡೆಯಿತು.

ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಹಾಗೂ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಶ್ರೀಮತಿ ನಿಧಿ, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್, ಶಿಬಾಜೆ ಗ್ರಾ.ಪಂ. ಸದಸ್ಯೆ ವನಿತಾ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲ್ಯಾನ್, ನಿರ್ದೇಶಕ ಮುರುಳೀಧರ್ ಶೆಟ್ಟಿಗಾರ್, ಅರಸಿನಮಕ್ಕಿ ಗ್ರಾ.ಪಂ. ಸದಸ್ಯ ಪ್ರೇಮಚಂದ್ರ ಉಪಸ್ಥಿತರಿದರು.


ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಮಿತ್ರನಾಗಿ “ಶ್ರೀನಿಧಿ ಜನಸೇವಾ ಕೇಂದ್ರ” ದಲ್ಲಿ ಕಾರ್ಯಾರಂಭಿಸಲಿದ್ದು ಇದರಿಂದಾಗಿ ಇನ್ನು ಮುಂದೆ 5 ಗ್ರಾಮಗಳ ಜನರು ಸದ್ರಿ ಬ್ಯಾಂಕ್ ನ ವ್ಯವಹಾರವನ್ನು ಮಾಡಬಹುದಾಗಿದೆ.

ಬಂದಂತಹ ಅತಿಥಿ ಗಣ್ಯರನ್ನು ಶ್ರೀನಿಧಿ ಜನಸೇವಾ ಕೇಂದ್ರದ ಗಣೇಶ್ ಹೊಸ್ತೋಟ, ಹಾಗೂ ಧನ್ಯ ಸತ್ಕರಿಸಿದರು.


Related posts

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya
error: Content is protected !!