September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

ಅರಸಿನಮಕ್ಕಿ: ಅರಸಿನಮಕ್ಕಿಯ ಶುಭರಾಮ್ ಕಾಂಪ್ಲೆಕ್ಸ್ ನಲ್ಲಿರುವ “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆಯು ಸೆ.4 ರಂದು ನಡೆಯಿತು.

ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಹಾಗೂ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ.ಎಸ್. ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಶ್ರೀಮತಿ ನಿಧಿ, ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧೀನ್, ಶಿಬಾಜೆ ಗ್ರಾ.ಪಂ. ಸದಸ್ಯೆ ವನಿತಾ, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. ಸಾಲ್ಯಾನ್, ನಿರ್ದೇಶಕ ಮುರುಳೀಧರ್ ಶೆಟ್ಟಿಗಾರ್, ಅರಸಿನಮಕ್ಕಿ ಗ್ರಾ.ಪಂ. ಸದಸ್ಯ ಪ್ರೇಮಚಂದ್ರ ಉಪಸ್ಥಿತರಿದರು.


ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಮಿತ್ರನಾಗಿ “ಶ್ರೀನಿಧಿ ಜನಸೇವಾ ಕೇಂದ್ರ” ದಲ್ಲಿ ಕಾರ್ಯಾರಂಭಿಸಲಿದ್ದು ಇದರಿಂದಾಗಿ ಇನ್ನು ಮುಂದೆ 5 ಗ್ರಾಮಗಳ ಜನರು ಸದ್ರಿ ಬ್ಯಾಂಕ್ ನ ವ್ಯವಹಾರವನ್ನು ಮಾಡಬಹುದಾಗಿದೆ.

ಬಂದಂತಹ ಅತಿಥಿ ಗಣ್ಯರನ್ನು ಶ್ರೀನಿಧಿ ಜನಸೇವಾ ಕೇಂದ್ರದ ಗಣೇಶ್ ಹೊಸ್ತೋಟ, ಹಾಗೂ ಧನ್ಯ ಸತ್ಕರಿಸಿದರು.


Related posts

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya
error: Content is protected !!