ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿಯಾಗಿ ನಗರದಲ್ಲಿ ಅನಿಯಮಿತ ವಿದ್ಯುತ್ ಕಡಿತ ಹಾಗೂ ಅದರಿಂದ ಎಲೆಕ್ಟ್ರಾನಿಕ್ಸ್ ಉಪಕರಣ ಗಳ ಮೇಲೆ ಆಗುವ ಪರಿಣಾಮ ಹಾಗೂ ಆದರಿಂದ ಆಗುವ ನಷ್ಟಗಳ ಬಗ್ಗೆ ಮನವರಿಕೆ ಮಾಡಲಾಯಿತು.

ಇದಕ್ಕೆ ಸ್ಪಂದಿಸಿದ ಅಧಿಕಾರಿ ತೊಂದರೆಗಳನ್ನು ಸರಿಪಡಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ರೊನಾಲ್ಡ್ ಲೋಬೊ, ಜತೆಕಾರ್ಯದರ್ಶಿ ಯಶವಂತ್ ಪಟವರ್ದನ್, ನಗರ ಪಂಚಾಯತ್ ಸದಸ್ಯ ಜಯಾನಂದ ಗೌಡ, ಜಯರಾಮ ಗೌಡ, ಶೀತಲ್ ಜೈನ್, ಸುಶೀಲ ಹೆಗ್ಡೆ, ಶರ್ಮಿಳಾ, ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.

Leave a Comment

error: Content is protected !!