25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

ಬೆಳ್ತಂಗಡಿ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ 3 ತಿಂಗಳ ಕಾಲ ಭಜನಾ ತರಬೇತಿಯನ್ನು ಪ್ರಾರಂಭಿಸಿದ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯ ಅಧ್ಯಕ್ಷರಾದ ಸಂದೇಶ್ ಅನಿಲ ಇವರು 3500 ಸಾವಿರ ಮಕ್ಕಳಿಗೆ ಭಜನಾ ತರಬೇತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರು ತುಮಕೂರು ಜಿಲ್ಲೆಯ ಶಿರಾ ಎಂಬಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿರಾ ಶ್ರೀ ದುರ್ಗಾಂಬಾ ಕುಣಿತ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವು ಸೆ.2 ರಂದು ನಡೆಯಿತು.

ಓಡೀಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಸದಸ್ಯ ಪ್ರದೀಪ್ ಕುಮಾರ್ , ಪುಂಜಾಲಕಟ್ಟೆ ಶ್ರೀ ರಾಮಾಂಜನೇಯ ಭಜನಾ ಮಂಡಳಿ ಸದಸ್ಯರಾದ ಚರಣ್, ಹೇಮಂತ್, ಸಿಂಧೂ, ಪೂರ್ನೇಶ್, ಚಿಂತನ್, ದೀಪಕ್ . ಸುಶಾಂತ್, ಶ್ರೀ ನಾಗಶ್ರೀ ಭಜನಾ ಮಂಡಳಿ ಕೊಜಪ್ಪಾಡಿಯ ಸದಸ್ಯರು ಗಗನ್, ಆಕಾಶ್ , ಶ್ರೀ ಸದಾಶಿವ ಭಜನಾ ಮಂಡಳಿ ಮಲ್ಲಿಪಾಡಿ ಪಡಂಗಡಿ ದೀಕ್ಷಿತ್ , ಭವಿತ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನಾಳ ಇವರು ತರಬೇತಿಯನ್ನು ನೀಡಿದರು.


ಈ ಸಂದರ್ಭದಲ್ಲಿ ಭಜನಾ ತರಬೇತಿಯನ್ನು ನೀಡಿದ ಸಂದೇಶ್ ಅನಿಲ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ತರಬೇತಿಯನ್ನು ನೀಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಶ್ರೀ ರಾಘವೇಂದ್ರ ಸ್ವಾಮಿ ಮಠ ಶ್ರೀರಾಘವೇಂದ್ರ ಸ್ವಾಮಿಗಳ ಶೋಭಾಯಾತ್ರೆ ಯೊಂದಿಗೆ ರೊಡ್ ಶೋ ಭಜನಾ ಕಾರ್ಯಕ್ರಮ ನಡೆಯಿತು. ಶ್ರೀ ಭಗವ ರುಧ್ರಗಿರಿ ಇಲ್ಲಿಯ ಸದಸ್ಯರಾದಂತ ಸಚಿನ್, ಕೀರ್ತನ್, ಧನುಷ್, ಮನಿತ್, ಮಾನ್ವಿಷ್, ಸುಕೆಶ್ ಹಾಗೂ ಶ್ರೀ ರಾಮಾಂಜನೇಯ ಭಜನಾ ಮಂಡಳಿ ಮಾಲಾಡಿ ಇಲ್ಲಿಯ ಸಿಂಚನ್, ಪ್ರಸಾದ್ ಹಾಗೂ ಮಾಯ ಮಾಹೇಶ್ವರ ಭಜನಾ ಮಂಡಳಿ ಮಾಯ ಇಲ್ಲಿಯ ಶೋಭಿತ್ತಯ, ರಂಜನ್ ಭಾಗವಹಿಸಿದರು.

Related posts

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya
error: Content is protected !!