25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

ಉಜಿರೆ : ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು  ಕಳೆದ ಆರ್ಥಿಕ ವರ್ಷದಲ್ಲಿ 1811 ಸದಸ್ಯರನ್ನು ಹೊಂದಿದ್ದು,  76.57 ಕೋಟಿ ರೂ. ವ್ಯವಹಾರ ನಡೆಸಿದೆ. ಸದ್ರಿ ವಾರ್ಷಿಕ ಸಾಲಿನಲ್ಲಿ 39 ಲಕ್ಷ ರೂ. ಲಾಭ  ಗಳಿಸಿದ್ದು, ಸದಸ್ಯರಿಗೆ ಶೇ.8 ಡಿವಿಡೆಂಟ್ ಘೋಷಣೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ತಿಳಿಸಿದರು.


 ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭನದಲ್ಲಿ ಸೆ.3 ರಂದು ನಡೆದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದಲ್ಲಿ ಜನರು ವಿಶ್ವಾಸ ಇರಿಸಿ ವ್ಯವಹಾರಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಸಂಘವು ಒಟ್ಟು 11.87 ಕೋ.ರೂ. ವಿವಿಧ ಠೇವಣಿ ಹೊಂದಿದೆ. ಸಂಘದ ಅರಸಿನಮಕ್ಕಿ ಶಾಖೆ  ಸೆ.29ರಂದು ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು  ಅವರು ವಿನಂತಿಸಿಕೊಂಡರು .

ಸಂಘದ ಉಪಾಧ್ಯ ಕ್ಷ ಸುಂದರ ಗೌಡ ಇಚ್ಚಿಲ, ನಿರ್ದೇಶಕರಾದ ಕೆ.ಗಂಗಾಧರ ಗೌಡ, ಬಾಲಕೃಷ್ಣ ಗೌಡ ಕೇರಿಮಾರು, ಎನ್.ಲಕ್ಷಣ ಗೌಡ, ಶಿವಕಾಂತ ಗೌಡ, ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿನೇಶ್ ಗೌಡ ಕಲ್ಲಾಜೆ ವಾರ್ಷಿಕ ವರದಿ ಮಂಡಿಸಿ ಅನುಮೋದಿಸಲಾಯಿತು . ನಿರ್ದೇಶಕಿ ಚೇತನಾ ಚಂದ್ರಶೇಖರ್ ಧರ್ಮದಕಳ ಸ್ವಾಗತಿಸಿ, ನಿರ್ದೇಶಕಿ ಸರೋಜಿನಿ ವಿಜಯ ಕುಮಾರ್ ಗೌಡ ವಂದಿಸಿದರು. ಸಿಬಂದಿ ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.

Related posts

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya
error: Content is protected !!