25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಸಹಭಾಗಿತ್ವದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು.
ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಶುಭಾಶಂಸನೆ ಮಾಡಿ ಸಂಸ್ಕೃತ ಭಾಷಾ ಮಹತ್ವ ತಿಳಿಸಿದರು.

ಮಹಾಕವಿ ಕಾಳಿದಾಸನ ಮೇಘದೂತಮ್ ಕಾವ್ಯದ ಅನುಸಂಧಾನ ಕಾರ್ಯಕ್ರಮ ನಡೆಯಿತು. ಅರ್ಥಗಾರಿಕೆಯಲ್ಲಿ ಅಂಜಲಿ , ಲಘ ಶಾಸ್ತ್ರೀಯ ಸಂಗೀತದಲ್ಲಿ ಪ್ರಸೀದಾ ರಾವ್ , ಶ್ಲೋಕದಲ್ಲಿ ಆದಿತ್ಯ ಹೆಗಡೆ , ಶಾಸ್ತ್ರೀಯ ಸಂಗೀತದಲ್ಲಿ ಸಿಂಧೂರ ಶೆಂಡ್ಯೆ, ಯಕ್ಷಗಾನ ಭಾಗವತಿಕೆಯಲ್ಲಿ ಸಿಂಚನಾ, ವರ್ಣ ಚಿತ್ರದಲ್ಲಿ ಸೌಂದರ್ಯ ಅವರು ಮೇಘದೂತಮ್ ಕಾವ್ಯವನ್ನು ಪ್ರಸ್ತುತಪಡಿಸಿದರು. ಅಭಿರಾಮ ಹೆಚ್.ವೈ ಹಾಗೂ ವೈಶಾಖ್ ಪಕ್ಕವಾದ್ಯಗಳಲ್ಲಿ ಸಹಕರಿಸಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಚಂದ್ರಮೌಳಿ ಶರ್ಮಾ ಸ್ವಾಗತಿಸಿ, ಶ್ರೀತುಳಸೀ ಭಟ್ ವಂದಿಸಿದರು. ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ಹೆಗಡೆ ನಿರೂಪಿಸಿದರು.

Related posts

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya
error: Content is protected !!