ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಸಹಭಾಗಿತ್ವದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು.
ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಶುಭಾಶಂಸನೆ ಮಾಡಿ ಸಂಸ್ಕೃತ ಭಾಷಾ ಮಹತ್ವ ತಿಳಿಸಿದರು.

ಮಹಾಕವಿ ಕಾಳಿದಾಸನ ಮೇಘದೂತಮ್ ಕಾವ್ಯದ ಅನುಸಂಧಾನ ಕಾರ್ಯಕ್ರಮ ನಡೆಯಿತು. ಅರ್ಥಗಾರಿಕೆಯಲ್ಲಿ ಅಂಜಲಿ , ಲಘ ಶಾಸ್ತ್ರೀಯ ಸಂಗೀತದಲ್ಲಿ ಪ್ರಸೀದಾ ರಾವ್ , ಶ್ಲೋಕದಲ್ಲಿ ಆದಿತ್ಯ ಹೆಗಡೆ , ಶಾಸ್ತ್ರೀಯ ಸಂಗೀತದಲ್ಲಿ ಸಿಂಧೂರ ಶೆಂಡ್ಯೆ, ಯಕ್ಷಗಾನ ಭಾಗವತಿಕೆಯಲ್ಲಿ ಸಿಂಚನಾ, ವರ್ಣ ಚಿತ್ರದಲ್ಲಿ ಸೌಂದರ್ಯ ಅವರು ಮೇಘದೂತಮ್ ಕಾವ್ಯವನ್ನು ಪ್ರಸ್ತುತಪಡಿಸಿದರು. ಅಭಿರಾಮ ಹೆಚ್.ವೈ ಹಾಗೂ ವೈಶಾಖ್ ಪಕ್ಕವಾದ್ಯಗಳಲ್ಲಿ ಸಹಕರಿಸಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು. ಚಂದ್ರಮೌಳಿ ಶರ್ಮಾ ಸ್ವಾಗತಿಸಿ, ಶ್ರೀತುಳಸೀ ಭಟ್ ವಂದಿಸಿದರು. ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ಹೆಗಡೆ ನಿರೂಪಿಸಿದರು.

Related posts

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!