23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ 10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ನಡೆಯಲಿದೆ.

ಮಧ್ಯಾಹ್ನ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಬಳಂಜ ಬಿಲ್ಲವ ಸಂಘದ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ವಹಿಸಲಿದ್ದಾರೆ.

ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ಧಾರ್ಮಿಕ ಉಪನ್ಯಾಸ ಮಾಡಲಿದ್ದಾರೆ. ಮುಖ್ಯ ಆತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್,ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್, ಪ್ರಗತಿಪರ ಕೃಷಿಕರಾದ ಸುರೇಶ್ ಶೆಟ್ಟಿ ಕುರೆಲ್ಯ, ವಿಶ್ವನಾಥ ಹೊಳ್ಳ,ಗ್ರಾ.ಪಂ ಮಾಜಿ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ,ಸದಸ್ಯ ರವೀಂದ್ರ ಬಿ ಅಮೀನ್, ಯುವ ಉದ್ಯಮಿ ಪ್ರವೀಣ್ ಪೂಜಾರಿ ಮಂಗಳೂರು,ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಕ್ರಿಡಾಕೂಟದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿ ನೇರವೇರಿಸಲಿದ್ದಾರೆ. ಮುಖ್ಯ ಅತಿಧಿಗಳಾಗಿ ಗ್ರಾ‌ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಕೃಷಿಕ ಸೀತರಾಮ ಪೂಜಾರಿ,ಉದ್ಯಮಿ ಜನಾರ್ಧನ ಪೂಜಾರಿ,ಗ್ರಾ.ಪಂ ಸದಸ್ಯ ಜಯಶೆಟ್ಟಿ ಪಾದೆ,ಬ್ರಹ್ಮಶ್ರೀ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ, ಕಂಚಿನಡ್ಕ ಕ್ಷೇತ್ರದ ಅಧ್ಯಕ್ಷ ವಿನಯ್ ಶೆಟ್ಟಿ ಭಾಗವಹಿಸಲಿದ್ದಾರೆ.

ಪುಟಾಣಿ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ದೆ,ಬಾಲಕ- ಬಾಲಕಿಯರಿಗೆ, ಯುವಕ, ಯುವತಿಯರಿಗೆ, ಪುರಷರಿಗೆ, ಮಹಿಳೆಯರಿಗೆ ವಿವಿಧ ಸ್ಪರ್ದೆಗಳು ನಡೆಯಲಿದೆ. ವಾಲಿಬಾಲ್ ಹಗ್ಗಜಗ್ಗಾಟ,ತ್ರೋಬಾಲ್, ವಿವಿಧ ಫನ್ನಿ ಗೇಮ್, ಗೋಣಿ ಚೀಲ ಸ್ಪರ್ದೆಗಳು ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya
error: Content is protected !!